Featured

ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್: ಸಚಿವ ಮುನಿಯಪ್ಪ – vishwanews24

ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು, ಶೇಖರಣೆ ಮಾಡಿದರೆ ಕಾನೂನು ಕ್ರಮ ..

ಯಾರಿಗೆ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಲಭಿಸುತ್ತದೆ..?

ಬೆಂಗಳೂರು : ಇರಾನ್- ಇಸ್ರೇಲ್, ಅಮೆರಿಕ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಅದೇರೀತಿ ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬುಧವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಡುಗೆ ಅನಿಲ ಸಿಲಿಂಡರ್ ದೊರೆಯುವುದಿಲ್ಲ ಎಂದು ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಈಗಾಗಲೇ ಸಭೆ ನಡೆಸಲಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದರು.

ತೈಲ ಸರಬರಾಜು ಕಂಪೆನಿಗಳಾದ ಎಚ್.ಪಿ., ಇಂಡಿಯನ್ ಆಯಿಲ್, ಶೇಲ್ ಸೇರಿದಂತೆ ಇತರ ಕಂಪೆನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಸಿಲಿಂಡರ್ ಸಮಸ್ಯೆಗೆ ಪರಿಹಾರ ಕಂಡು ಕಂಡುಕೊಳ್ಳಲಾಗಿದೆ. ಅದರಂತೆ, ಒಂದು ತಿಂಗಳಿಗೆ ಒಂದು ಕುಟುಂಬಕ್ಕೆ ಒಂದು ಸಿಲಿಂಡರ್ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ :

ಅದೇ ರೀತಿ, ವಾಣಿಜ್ಯ ಬಳಕೆ ಸಿಲಿಂಡರ್ ಗಳ ಮೇಲೆ ಕೊಂಚ ಮಟ್ಟಿಗೆ ನಿಯಂತ್ರಣ ಹೇರಲಾಗಿದ್ದು, ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಹಾಗೂ ಇತರ ಅನಗತ್ಯ ಬಳಕೆಗೆ ಕಡಿವಾಣ ಹಾಕಲಾಗಿದೆ. ಇದು ತಾತ್ಕಾಲಿಕ ನಿರ್ಬಂಧವೇ ಆಗಿದೆ ಎಂದು ಅವರು ತಿಳಿಸಿದರು.

ಇಲ್ಲಿಯವರೆಗೂ ಎಲ್ಲೂ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಯಾವ ದೇಶದಿಂದಲೂ ಗ್ಯಾಸ್ ಸರಬರಾಜು ಆಗಿಲ್ಲವೆಂದರೂ, ನಾವು ಕನಿಷ್ಠ ಶೇಕಡಾವಾರು 20ರಿಂದ 30ರಷ್ಟು ಸ್ವಂತವಾಗಿಯೇ ಅನಿಲ ಉತ್ಪಾದನೆ ಮಾಡಬಹುದು. ಈ ಪ್ರಮಾಣದಲ್ಲಿಯೇ ನಾವು ಅಡುಗೆ ಅನಿಲ ಗ್ಯಾಸ್ ಬಳಕೆ ಮಾಡಬಹುದಾಗಿದೆ. ಹೀಗಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿ ಮುಂಗಡವಾಗಿ ಕಾಯ್ದಿರಿಸುವಿಕೆ ಪ್ರಕ್ರಿಯೆ ಮಾಡಬಾರದು ಎಂದು ಸಚಿವರು ವಿವರಿಸಿದರು.

ಶೇಕಡಾ 70ರಷ್ಟು ಅನಿಲ ವಿದೇಶದಿಂದ ಬರಬೇಕು.ಆದರೆ, ಇರಾನ್ ಜಲ ಮಾರ್ಗದಲ್ಲಿ ತಡೆ ಹಾಕಿರುವ ಕಾರಣ ಸೂಕ್ತ ಸಮಯಕ್ಕೆ ಅನಿಲ ಮತ್ತು ಕಚ್ಚ ತೈಲವು ಭಾರತಕ್ಕೆ ಬರುತ್ತಿಲ್ಲ ಎಂದ ಅವರು, ಇದು ಯುದ್ಧದ ಸಮಯ. ಆದ ಕಾರಣ, ಗ್ಯಾಸ್ ವ್ಯರ್ಥ ಮಾಡಬೇಡಿ ಎಲ್ಲರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ :

ಶೇಖರಣೆ ಮಾಡಿದರೆ ಕೇಸ್..

ಗ್ಯಾಸ್ ಬೇಡಿಕೆ ಹೆಚ್ಚಿರುವ ನೆಪ ಇಟ್ಟುಕೊಂಡು ಅಕ್ರಮವಾಗಿ ಅಡುಗೆ ಅನಿಲ ಅಥವಾ ವಾಣಿಜ್ಯ ಬಳಕೆಯ ಸಿಲಿಂಡರ್ ಯಾರಾದರೂ ಅಕ್ರಮವಾಗಿ ದಾಸ್ತಾನು, ಶೇಖರಣೆ ಮಾಡಿದರೆ ಮುಲಾಜಿಲ್ಲದೆ, ಕಾನೂನು ರೀತ್ಯಾ ಕೇಸ್ ಹಾಕುತ್ತೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಾಕೀತು ಮಾಡಿದ್ದಾರೆ.

ಯಾರಿಗೆ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಲಭಿಸುತ್ತದೆ?

*ಶಾಲಾ ಕಾಲೇಜು

* ಆಸ್ಪತ್ರೆ

*ಸರಕಾರ ನಿಗದಿತ ಸ್ಥಳ ಅಥವಾ ತುರ್ತು ಸೇವೆ

ವಾಣಿಜ್ಯ ಬಳಕೆಗೆ ಗ್ಯಾಸ್ ಎಲ್ಲಿ ನಿಷೇಧ?

* ಹೋಟೆಲ್ ಮತ್ತು ರೆಸ್ಟೋರೆಂಟ್

* ಕಲ್ಯಾಣ ಮಂಟಪ

ವಾರಕ್ಕೊಮ್ಮೆ ಸಿಲಿಂಡರ್ ಕುರಿತು ಸಭೆ.

ಸದ್ಯ ಸಿಲಿಂಡರ್ ಬಳಕೆ ಮಾರ್ಗ ಸೂಚಿ ಮತ್ತು ಇತರೆ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಇದನ್ನೂ ಓದಿ :

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

14 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago