Featured

ಪ್ರಥಮ ಬಾರಿಗೆ ಉಡುಪಿ ಆಗಮಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತದ ಪರವಾಗಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಚೇತನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ,ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲವಿಷಯಗಳನ್ನು ಹಂಚಿಕೊಂಡರು.ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ.

ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ.ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ.ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ.ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದು ಹೇಳಿದರು.

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ,ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ.ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.

ಎಸ್ ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐ ಗೆ ನೀಡಿದ್ದೇವೆ.ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು ಎಂದು ಹೇಳಿದರು. ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ ,ಕುಮಾರಸ್ವಾಮಿ ಮೊಸರಲ್ಲಿ‌ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದಷ್ಟೇ ಚುಟುಕಾಗಿ ಪ್ರತಿಕ್ರಿಯೆ ನೀಡಿದರು.

ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

3 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

3 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

6 hours ago