Featured

ಪ್ರಥಮ ಬಾರಿಗೆ ಉಡುಪಿ ಆಗಮಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತದ ಪರವಾಗಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಚೇತನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ,ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲವಿಷಯಗಳನ್ನು ಹಂಚಿಕೊಂಡರು.ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ.

ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ.ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ.ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ.ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದು ಹೇಳಿದರು.

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ,ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ.ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.

ಎಸ್ ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐ ಗೆ ನೀಡಿದ್ದೇವೆ.ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು ಎಂದು ಹೇಳಿದರು. ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ ,ಕುಮಾರಸ್ವಾಮಿ ಮೊಸರಲ್ಲಿ‌ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದಷ್ಟೇ ಚುಟುಕಾಗಿ ಪ್ರತಿಕ್ರಿಯೆ ನೀಡಿದರು.

ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

34 minutes ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

4 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

8 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

8 hours ago