ಮಂಗಳೂರು : ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ ನಗರದ ಮಿಲಾಗ್ರಿಸ್ ಮತಗಟ್ಟೆಯಲ್ಲಿ ಮತದಾನಗೈದರು.
ಬಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿದ ಮಂಗಳಮುಖಿಯರು ಸಾಲಿನಲ್ಲೇ ನಿಂತು ಮತ ಚಲಾಯಿಸಿದರು.
ಈ ಸಂದರ್ಭ ಮಂಗಳಮುಖಿ ಸಂಜನಾ ಎಂಬವರು ಮಾತನಾಡಿ ‘ನಾವು ಮತದಾನ ಮಾಡಲು ಬೇಡಿಕೆ ಸಲ್ಲಿಸುತ್ತಲೇ ಇದ್ದೆವು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಈ ಒಂದು ಅವಕಾಶ ಸಿಕ್ಕಿದೆ. ಹಾಗಾಗಿ ನಮಗೆ ಇಂದು ಸ್ವಾತಂತ್ರ ಸಿಕ್ಕಿದೆ ಎನ್ನಬಹುದು. ಈ ಸಂತಸದ ಕ್ಷಣವನ್ನು ನಾವು ಎಂದೂ ಕೂಡಾ ಮರೆಯಲು ಸಾಧ್ಯವಿಲ್ಲ’ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]