Featured

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪಿಎಂ ಮೋದಿ -Vishwanews24

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪಿಎಂ ಮೋದಿ -Vishwanews24

ನವದೆಹಲಿ: ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಪ್ರಧಾನಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಮನೆಗಳನ್ನು ಉದ್ಘಾಟಿಸಿದರು ಮತ್ತು ಈ ಯೋಜನೆಯಡಿ ಸವಲತ್ತುಗಳನ್ನು ಪಡೆದ ಧಾರ್, ಸಿಂಗ್ರೌಲಿ ಮತ್ತು ಗ್ವಾಲಿಯರ್ ಅವರ ಫಲಾನುಭವಿಗಳೊಂದಿಗೆ  ಸಂವಾದ ನಡೆಸಿದರು. ಯೋಜನೆಯ ಫಲಾನುಭವಿಗಳನ್ನು ಅಭಿನಂದಿಸಿದ ಪಿಎಂ ಮೋದಿ, “ಈ ದೀಪಾವಳಿ ಮತ್ತು ಇತರ ಹಬ್ಬಗಳಲ್ಲಿ ನಿಮ್ಮ ಆಚರಣೆ ಇನ್ನಷ್ಟು ಸಡಗರದಿಂದ ಕೂಡಿರಲಿದೆ. ಇದು ಕೊರೋನಾ ಕಾಲವಾಗಿರದೆ ಹೋಗಿದ್ದರೆ ನಿಮ್ಮ ಪ್ರಧಾನ ಸೇವಕ (ಪ್ರಧಾನಿ ಮೋದಿ) ನಿಮ್ಮ ನಡುವೆ ಇರುತ್ತಿದ್ದರು” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಭಾರತೀಯ ಜನತಾ ಪಕ್ಷದ ಸಂಸದ ಜ್ಯೋತಿರಾದಿತ್ಯ  ಸಿಂಧಿಯಾ ಇತರರು ಭಾಗವಹಿಸಿದ್ದರು

“ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕಲ್ಯಾಣ ಯೋಜನೆಗಳ ಮೂಲಕ ದೇಶದ ದಿಕ್ಕು ಹಾಗೂ ಸ್ಥಾನಮಾನವನ್ನು ಬದಲಾಯಿಸಿದ್ದಾರೆ. ಇದಕ್ಕಾಗಿ  ಮಧ್ಯಪ್ರದೇಶದ ಜನರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ” ಎಂದು ಚೌಹಾನ್ ಹೇಳಿದರು.

“ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, ನಾವು 20 ಲಕ್ಷ ಮನೆಗಳಲ್ಲಿ 17 ಲಕ್ಷ ಮನೆ ನಿರ್ಮಿಸಿದ್ದೇವೆ. ದೇಶದ ಪ್ರತಿಯೊಬ್ಬ ಬಡವರಿಗೆ ಸ್ವಂತ ಮನೆ ಇರಬೇಕು ಎನ್ನುವುದು  ಪ್ರಧಾನಮಂತ್ರಿ ಅವರ  ಕನಸು. ಅವರ ಆಶೀರ್ವಾದದಿಂದ ಮಧ್ಯಪ್ರದೇಶ ಈ ದಿಕ್ಕಿನಲ್ಲಿ ವೇಗವಾಗಿ ಮುನ್ನಡೆಯುತ್ತಿದೆ” ಎಂದು ಅವರು ಹೇಳಿದರು

Vishwa News 24

Recent Posts

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

12 seconds ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

44 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

23 hours ago