Featured

ಪ್ರಧಾನಮಂತ್ರಿ ಕಿಸಾನ್‌ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಕೃಷಿಕರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೇರಿದ್ದ ಮೊದಲ ಸಂಪುಟ ಸಭೆ ಈ ನಿರ್ಧಾರವನ್ನು ತೆಗೆದುಕೊಂಡಿತು. ಬೊಕ್ಕಸಕ್ಕೆ ಇದರಿಂದ ₹ 87,000 ಕೋಟಿ ಹೊರೆ ಆಗಲಿದೆ.

ಜೊತೆಗೆ, ಸುಮಾರು ಐದು ಕೋಟಿ ರೈತರಿಗೆ ನೆರವಾಗುವಂತೆ ₹ 10,000 ಕೋಟಿ ಮೊತ್ತದ ಪಿಂಚಣಿ ಯೋಜನೆಗೂ ಸಂಪುಟವು ಅನುಮೋದನೆ ನೀಡಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಚುನಾವಣಾ ಪೂರ್ವದಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ₹ 75,000 ಕೋಟಿ ಮೊತ್ತದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಸಿದ್ಧಿ (ಪಿಎಂಕೆಎಎಸ್‌ಎಸ್‌) ಯೋಜನೆಯನ್ನು ಪ್ರಕಟಿಸಿತ್ತು.  ವಾರ್ಷಿಕ ₹ 6,000ವನ್ನು ಮೂರು ಕಂತುಗಳಲ್ಲಿ ವಿತರಿಸಲಿದ್ದು, ಎರಡು ಹೆಕ್ಟೇರ್‌ವರೆಗೆ ಭೂಮಿ ಹೊಂದಿರುವ ಸುಮಾರು 12.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಲಾಭ ದೊರೆಯಲಿದೆ ಎಂದು ಸರ್ಕಾರ ಹೇಳಿತ್ತು.

ಪರಿಷ್ಕೃತ ತೀರ್ಮಾನದಂತೆ ಯೋಜನೆ ವ್ಯಾಪ್ತಿಗೆ ಹೆಚ್ಚುವರಿಯಾಗಿ 2 ಕೋಟಿ ರೈತರು ಸೇರುವರು. ಬೊಕ್ಕಸಕ್ಕೆ ಹೆಚ್ಚುವರಿ ₹ 12,000 ಕೋಟಿ ಹೊರೆ ಬೀಳಲಿದೆ. ಒಟ್ಟಾರೆ 14.5 ಕೋಟಿ ರೈತರಿಗೆ ಇದರ ಲಾಭ ಸಿಗಲಿದೆ.

2019–20ನೇ ಹಣಕಾಸು ವರ್ಷದಲ್ಲಿ ಈ ಯೋಜನೆ ಜಾರಿಗೆ ಒಟ್ಟು ₹ 87,217.50 ಕೋಟಿ ಬೇಕಾಗಲಿದೆ ಎಂದು ಸಚಿವರು ವಿವರ ನೀಡಿದರು.

ಅಧಿಕೃತ ಮಾಹಿತಿ ಪ್ರಕಾರ, ಯೋಜನೆಯಡಿ ಆಗಲೇ ಸುಮಾರು 3.11 ಕೋಟಿ ಸಣ್ಣ, ಅತಿ ಸಣ್ಣ ರೈತರು ಮೊದಲ ಕಂತಿನ ₹ 2,000 ಅನ್ನು ಪಿಎಂ–ಕಿಸಾನ್‌ ಯೋಜನೆಯಡಿ ವಿತರಿಸಲಾಗಿದೆ. 2.75 ಕೋಟಿ ರೈತರಿಗೆ ಎರಡನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ಪಿಂಚಣಿ ಯೋಜನೆಗೂ ಅಸ್ತು: ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್‌ ಪಿಂಚಣಿ ಯೋಜನೆಗೂ ಸಂಪುಟ ಸಭೆ ಅನುಮೋದನೆ ನೀಡಿತು. 60 ವರ್ಷ ವಯಸ್ಸು ಮೀರಿದ ಸಣ್ಣ ಮತ್ತು ಅತಿ ಸಣ್ಣ ಕೃಷಿ ಹಿಡುವಳಿದಾರರಿಗೆ ಮಾಸಿಕ ₹ 3000 ಪಿಂಚಣಿ ನೀಡುವುದು ಈ ಯೋಜನೆಯ ಉದ್ದೇಶ.

ವ್ಯಾಪಾರಿಗಳಿಗೆ ಪಿಂಚಣಿ: 60ವರ್ಷ ವಯಸ್ಸು ಮೀರಿದ ವ್ಯಾಪಾರಿಗಳಿಗೆ ಮಾಸಿಕ ₹ 3,000 ಪಿಂಚಣಿ ಖಾತರಿ ನೀಡುವ ಯೋಜನೆಗೂ ಸಂಪುಟ ಸಮ್ಮತಿ ನೀಡಿದೆ. ಇದರಿಂದ ಸುಮಾರು 3 ಕೋಟಿ ಚಿಲ್ಲರೆ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

‘ಮೂರು ವರ್ಷಗಳಲ್ಲಿ ಐದು ಕೋಟಿ ವ್ಯಾಪಾರಿಗಳು ಯೋಜನೆ ವ್ಯಾಪ್ತಿಗೆ ಸೇರುವ ನಿರೀಕ್ಷೆಯಿದೆ‍’ ಎಂದು ಸಚಿವ ಪ್ರಕಾಶ್‌ ಜಾವಡೇಕರ್ ತಿಳಿಸಿದರು.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

3 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

3 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

3 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

3 hours ago