ಉಡುಪಿ: ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಯೋಜನೆಯಲ್ಲಿ 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಎನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ ತಾರಸಿ ಮೇಲೆ ಸೋಲಾರ್ ಫ್ಯಾನಲ್ ಅಳವಡಿಸಿ ಸಂಪರ್ಕ ನೀಡಲಾಗಿದೆ ಎಂದು ಸಂಸದರ ಕಚೇರಿ ಪ್ರಕಟಣೆ ಮಾಹಿತಿ ನೀಡಿದೆ.
ಒಬ್ಬ ಫಲಾನುಭವಿಗೆ 300ಕ್ಕೂ ಮಿಕ್ಕಿ ಯೂನಿಟ್ ವಿದ್ಯುತ್ ಒದಗಿಸುವ ದೃಷ್ಟಿಯಿಂದ 2,06,000 ರೂ. ಸಾಲ ಸೌಲಭ್ಯ ವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಒದಗಿಸಲಾಗುತ್ತದೆ. ಆ ಪೈಕಿ 78,000ರೂ.ಗಳನ್ನು ಕೇಂದ್ರ ಸರಕಾರ ಸಬ್ಸಿಡಿ ರೂಪದಲ್ಲಿ ಒದಗಿಸುತ್ತಿದೆ. ಉಡುಪಿ ಜಿಲ್ಲೆಗೆ ಈಗಾಗಲೇ 299 ಫಲಾನುಭವಿಗಳ ಖಾತೆಗೆ ಸಬ್ಸಿಡಿ ಬಂದಿದೆ ಎಂದು ಸಂಸದರ ಹೇಳಿಕೆ ತಿಳಿಸಿದೆ.
ಹಾಲಿವರ್ಷ ಸೂರ್ಯ ಘರ್ ಯೋಜನೆಯ ಮೂಲಕ 1 ಕೋಟಿ ಕುಟುಂಬಗಳಿಗೆ ಸೋಲಾರ್ ವಿದ್ಯುತ್ ಅಳವಡಿಸುವ ಯೋಜನೆಯ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಬ್ಯಾಂಕ್ ಸಾಲ ಪಡೆದು ಕೇವಲ ಒಂದು ತಿಂಗಳೊಳಗೆ ಕೇಂದ್ರ ಸರ್ಕಾರದ ಮೂಲಕ ಫಲಾನುಭವಿಗಳ ಖಾತೆಗೆ ಸಬ್ಸಿಡಿ ಒದಗಿಸಿದ್ದು ಈ ಯೋಜನೆಯ ವಿಶೇಷವಾಗಿದೆ ಎಂದವರು ಹೇಳಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…