Featured

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ

1947 ರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ.

ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ 1:30 ಕ್ಕೆ ʻಸೇವಾ ತೀರ್ಥʼ ಹೆಸರನ್ನ ಅನಾವರಣಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಹೊಸ ಕಟ್ಟಡವು ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್‌ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳನ್ನ ಒಳಗೊಂಡಿರಲಿದೆ. ಇವೆಲ್ಲವೂ ಈ ಹಿಂದೆ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದವು.

ಇದನ್ನೂ ಓದಿ: 

 

ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನ ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಸಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.

ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

41 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

49 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago