Featured

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ

1947 ರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ.

ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ 1:30 ಕ್ಕೆ ʻಸೇವಾ ತೀರ್ಥʼ ಹೆಸರನ್ನ ಅನಾವರಣಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಹೊಸ ಕಟ್ಟಡವು ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್‌ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳನ್ನ ಒಳಗೊಂಡಿರಲಿದೆ. ಇವೆಲ್ಲವೂ ಈ ಹಿಂದೆ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದವು.

ಇದನ್ನೂ ಓದಿ: 

 

ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನ ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಸಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.

ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago