Featured

ಪ್ರಧಾನಿಯವರು ರೈತರಲ್ಲಿ ಕ್ಷಮೆ ಕೇಳುವುದರಿಂದ ವಿದೇಶದಲ್ಲಿ ಅವರ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತದೆ ,  ಇದನ್ನು ನಾವು ಬಯಸುವುದಿಲ್ಲ  : ರಾಕೇಶ್ ಟಿಕಾಯತ್ – Vishwanews24

ಪ್ರಧಾನಿಯವರು ರೈತರಲ್ಲಿ ಕ್ಷಮೆ ಕೇಳುವುದರಿಂದ ವಿದೇಶದಲ್ಲಿ ಅವರ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತದೆ , ಇದನ್ನು ನಾವು ಬಯಸುವುದಿಲ್ಲ  : ರಾಕೇಶ್ ಟಿಕಾಯತ್ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರೈತರಲ್ಲಿ ಕ್ಷಮೆ ಕೇಳುವುದರಿಂದ ವಿದೇಶದಲ್ಲಿ ಅವರ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತದೆ. ಇದನ್ನು ನಾವು ಬಯಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಈ ಕುರಿತು ಟ್ವೀಟ್ ಮಾಡಿದ ಅವರು, ಪ್ರಧಾನಿ ಮೋದಿ ಕ್ಷಮೆ ಕೇಳುವುದು ನಮಗೆ ಇಷ್ಟವಿಲ್ಲ. ಜೊತೆಗೆ ವಿದೇಶದಲ್ಲಿ ಅವರ ಖ್ಯಾತಿಯನ್ನು ಕೆಡಿಸಲು ನಾವು ಬಯಸುವುದಿಲ್ಲ. ಪುನಃ ರೈತರ ಒಪ್ಪಿಗೆ ಇಲ್ಲದೆ ಕೃಷಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಕೈಗೊಂಡರೆ ಆ ಕಾನೂನನ್ನು ತರಲಾಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.

ಸುಮಾರು ಒಂದು ವರ್ಷದಿಂದ ಹಲವಾರು ರೈತ ಸಂಘಗಳು ಕೃಷಿ ಕಾಯ್ದೆ ರದ್ದುಗೊಳಿಸಲು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರವು ಮೂರು ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಿತ್ತು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮೂರು ರದ್ದಾದ ಕೃಷಿ ಕಾನೂನುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಕಾಯತ್, ಈ ಹೇಳಿಕೆಯು ರೈತರನ್ನು ಮೋಸಗೊಳಿಸುವ ಉದ್ದೇಶವನ್ನು ಹೊಂದಿದೆ ಜೊತೆಗೆ ಪ್ರಧಾನಿ ಅವರನ್ನು ಅವಮಾನಿಸುತ್ತದೆ. ಒಂದು ವೇಳೆ ಕೃಷಿ ಕಾನೂನುಗಳನ್ನು ಕೇಂದ್ರವು ಪುನಃ ಪರಿಚಯಿಸಿದರೆ ಆಂದೋಲನವನ್ನು ಪುನಾರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಈ ವಿಷಯದ ಕುರಿತು ಕೃಷಿ ಸಚಿವರು ಮಾತನಾಡಿ, ನಾಗ್ಪುರ ಕಾರ್ಯಕ್ರಮವೊಂದರಲ್ಲಿ ತಮ್ಮ ಹೇಳಿಕೆಯನ್ನು ತಿರುಚಿದ್ದಾರೆ. ಕೃಷಿ ಕಾನೂನುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಕೇಂದ್ರಕ್ಕೆ ಇಲ್ಲ ಎಂದು ನಂತರ ಸ್ಪಷ್ಟಪಡಿಸಿದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

14 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

14 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

14 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

14 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

17 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

18 hours ago