Featured

ಪ್ರಧಾನಿಯಿಂದ ವಿಶ್ವದ ಅತ್ಯಂತ ಎತ್ತರದ ಉಕ್ಕಿನ ಮನುಷ್ಯ ಸರ್ದಾರ್​ ಪಟೇಲರ ‘ಏಕತಾ ಪ್ರತಿಮೆ’ ಲೋಕಾರ್ಪಣೆ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ ರ ‘ಏಕತಾ ಪ್ರತಿಮೆ’ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದರು.

ಗುಜರಾತ್‍ನ ಕೆವಾಡಿಯಾ ಬಳಿ ಸರ್ದಾರ್ ಪಟೇಲರ ಅತಿ ಎತ್ತರದ ಪ್ರತಿಮೆ ಅನಾವರಣಗೊಂಡಿತು. ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯು ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿದ್ದು, ಪ್ರತಿಮೆ 182 ಮೀಟರ್‌ ಎತ್ತರ ಹೊಂದಿದೆ. ಈ ಮೂಲಕ ದೇಶದ ‘ಏಕತೆಯ ಹರಿಕಾರ’ನಿಗೆ ಗೌರವ ಸಮರ್ಪಿಸಲಾಗಿದೆ.ದೇಶದ ಮೊದಲ ಉಪ ಪ್ರಧಾನಿ ಪಟೇಲ್‌ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಹೀಗಾಗಿ ಪ್ರತಿಮೆಗೆ ‘ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್‌ ಪಟೇಲ್‌ ಅವರ ಪ್ರತಿಮೆಯ ಮೂಲಕ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ‘ಏಕೀಕರಣ’ದ ಸಂದೇಶ ಸಾರಲು ಮುಂದಾಗಿದ್ದಾರೆ.

ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಪ್ರತಿಮೆಗೆ ಕುಂಭಾಭಿಷೇಕ ಮಾಡುವ ಮೂಲಕ ಅದನ್ನು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಟೇಲ್​ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

15 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

25 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

42 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

47 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

54 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago