Featured

ಪ್ರಧಾನಿಯಿಂದ ವಿಶ್ವದ ಅತ್ಯಂತ ಎತ್ತರದ ಉಕ್ಕಿನ ಮನುಷ್ಯ ಸರ್ದಾರ್​ ಪಟೇಲರ ‘ಏಕತಾ ಪ್ರತಿಮೆ’ ಲೋಕಾರ್ಪಣೆ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ ರ ‘ಏಕತಾ ಪ್ರತಿಮೆ’ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದರು.

ಗುಜರಾತ್‍ನ ಕೆವಾಡಿಯಾ ಬಳಿ ಸರ್ದಾರ್ ಪಟೇಲರ ಅತಿ ಎತ್ತರದ ಪ್ರತಿಮೆ ಅನಾವರಣಗೊಂಡಿತು. ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯು ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿದ್ದು, ಪ್ರತಿಮೆ 182 ಮೀಟರ್‌ ಎತ್ತರ ಹೊಂದಿದೆ. ಈ ಮೂಲಕ ದೇಶದ ‘ಏಕತೆಯ ಹರಿಕಾರ’ನಿಗೆ ಗೌರವ ಸಮರ್ಪಿಸಲಾಗಿದೆ.ದೇಶದ ಮೊದಲ ಉಪ ಪ್ರಧಾನಿ ಪಟೇಲ್‌ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಹೀಗಾಗಿ ಪ್ರತಿಮೆಗೆ ‘ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್‌ ಪಟೇಲ್‌ ಅವರ ಪ್ರತಿಮೆಯ ಮೂಲಕ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ‘ಏಕೀಕರಣ’ದ ಸಂದೇಶ ಸಾರಲು ಮುಂದಾಗಿದ್ದಾರೆ.

ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಪ್ರತಿಮೆಗೆ ಕುಂಭಾಭಿಷೇಕ ಮಾಡುವ ಮೂಲಕ ಅದನ್ನು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಟೇಲ್​ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago