Featured

ಪ್ರಧಾನಿ ಕುರ್ಚಿ ಏರಲು ರಾಹುಲ್ ಗಾಂಧಿ ಆತುರರಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಹೀನಾಯ ಸೋಲಾಗಿದೆ. ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ಮೋದಿ ಉತ್ತರ ನೀಡಿದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮತದಾನಕ್ಕೆ ಅನುಮತಿ ನೀಡಿದರು. ಸರ್ಕಾರದ ಪರ 325 ಮತಗಳು ಬಿದ್ದರೆ, ಅವಿಶ್ವಾಸ ನಿರ್ಣಯದ ಪರ 126 ಮತ ಬಂದಿತು. ಸದನದಲ್ಲಿ ಈ ವೇಳೆ ಒಟ್ಟು 451 ಸದಸ್ಯರು ಹಾಜರಿದ್ದರು.

ವಿಪಕ್ಷಗಳು ಮೋದಿ ಹಠಾವೋ ಎಂಬ ಉದ್ದೇಶದಿಂದ ಬಲ ಪ್ರದರ್ಶನಕ್ಕೆ ಮುಂದಾಗಿವೆ. ಇದು ಬಲ ಪ್ರದರ್ಶನ ಅಲ್ಲ, ಬಲವಂತದ ಪ್ರದರ್ಶನ ಅಂತಾ ವಾಗ್ದಾಳಿ ನಡೆಸಿದರು. ಯಾರು ಅಧಿಕಾರಕ್ಕೆ ಬರೋದಿಲ್ಲವೋ, ಅವರು ಅಹಂಕಾರವನ್ನು ಅಳವಡಿಸಿಕೊಂಡಿದ್ದಾರೆ. 2019ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿ ಯಂತೆ ವ್ಯಂಗ್ಯ ಮಾಡಿದರು.

ವಿರೋಧ ಬಣಗಳು ಒಂದಾಗಿವೆ: ಕೇವಲ ಓರ್ವ ಮೋದಿಯನ್ನು ಹಿಂದಿಕ್ಕಿಲು ಎಲ್ಲ ವಿರೋಧ ಬಣಗಳು ಒಂದಾಗಿವೆ. ಪ್ರಧಾನಿ ಕುರ್ಚಿ ಏರಲು ರಾಹುಲ್ ಗಾಂಧಿ ಆತುರರಾಗಿದ್ದಾರೆ. ಕೆಲವರು ತಾವು ಶಿವಭಕ್ತರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ನಾನು ಕೂಡ ಶಿವದೇವನನ್ನು ನಂಬುತ್ತೇನೆ ಮತ್ತು ಆರಾಧಿಸುತ್ತೇನೆ. ಇಂದು ಅದೇ ಶಿವನಲ್ಲಿ 2024ರಲ್ಲಿ ರಾಹುಲ್ ಇದೇ ರೀತಿ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಿ ಎಂದು ಕೇಳುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ತಾವೇ ಅಧಿಕಾರಕ್ಕೆ ಬರೋದು ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶದಲ್ಲಿ ಈಗಾಗಲೇ ಮುಳುಗಿದೆ. ಕಾಂಗ್ರೆಸ್ ಜೊತೆ ಹೋಗುವವರು ಮುಳಗಲಿದ್ದೀರಿ, ಹಾಗಾಗಿ ಅವರ ಜೊತೆ ಹೋಗುವುದನ್ನು ನಿಲ್ಲಿಸಿ ಅಂದ್ರು.

ನಮ್ಮದು ಕೆಲಸ ಮಾಡುವ ಸರ್ಕಾರ. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಎಲ್ಲ ಕೆಲಸಗಳನ್ನು ಕಾಂಗ್ರೆಸ್ ಸರ್ಕಾರ ಮಾಡಬಹುದಿತ್ತು ಆದ್ರೆ ಮಾಡಲಿಲ್ಲ. ಜನ್‍ಧನ್ ಯೋಜನೆಯಲ್ಲಿ ಬ್ಯಾಂಕ್ ನೋಡದವರು ಖಾತೆಗಳನ್ನು ಹೊಂದಿದ್ದಾರೆ. ಇದೇ ವೇಳೆ ಸರ್ಕಾರದ ಯೋಜನೆ ಕಾರ್ಯಕ್ರಮಗಳ ಉದಾಹರಣೆಯನ್ನು ನೀಡುವ ಮೂಲಕ ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago