ನವದೆಹಲಿ: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಹೀನಾಯ ಸೋಲಾಗಿದೆ. ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ಮೋದಿ ಉತ್ತರ ನೀಡಿದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮತದಾನಕ್ಕೆ ಅನುಮತಿ ನೀಡಿದರು. ಸರ್ಕಾರದ ಪರ 325 ಮತಗಳು ಬಿದ್ದರೆ, ಅವಿಶ್ವಾಸ ನಿರ್ಣಯದ ಪರ 126 ಮತ ಬಂದಿತು. ಸದನದಲ್ಲಿ ಈ ವೇಳೆ ಒಟ್ಟು 451 ಸದಸ್ಯರು ಹಾಜರಿದ್ದರು.
ವಿಪಕ್ಷಗಳು ಮೋದಿ ಹಠಾವೋ ಎಂಬ ಉದ್ದೇಶದಿಂದ ಬಲ ಪ್ರದರ್ಶನಕ್ಕೆ ಮುಂದಾಗಿವೆ. ಇದು ಬಲ ಪ್ರದರ್ಶನ ಅಲ್ಲ, ಬಲವಂತದ ಪ್ರದರ್ಶನ ಅಂತಾ ವಾಗ್ದಾಳಿ ನಡೆಸಿದರು. ಯಾರು ಅಧಿಕಾರಕ್ಕೆ ಬರೋದಿಲ್ಲವೋ, ಅವರು ಅಹಂಕಾರವನ್ನು ಅಳವಡಿಸಿಕೊಂಡಿದ್ದಾರೆ. 2019ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿ ಯಂತೆ ವ್ಯಂಗ್ಯ ಮಾಡಿದರು.
ವಿರೋಧ ಬಣಗಳು ಒಂದಾಗಿವೆ: ಕೇವಲ ಓರ್ವ ಮೋದಿಯನ್ನು ಹಿಂದಿಕ್ಕಿಲು ಎಲ್ಲ ವಿರೋಧ ಬಣಗಳು ಒಂದಾಗಿವೆ. ಪ್ರಧಾನಿ ಕುರ್ಚಿ ಏರಲು ರಾಹುಲ್ ಗಾಂಧಿ ಆತುರರಾಗಿದ್ದಾರೆ. ಕೆಲವರು ತಾವು ಶಿವಭಕ್ತರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ನಾನು ಕೂಡ ಶಿವದೇವನನ್ನು ನಂಬುತ್ತೇನೆ ಮತ್ತು ಆರಾಧಿಸುತ್ತೇನೆ. ಇಂದು ಅದೇ ಶಿವನಲ್ಲಿ 2024ರಲ್ಲಿ ರಾಹುಲ್ ಇದೇ ರೀತಿ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಿ ಎಂದು ಕೇಳುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ತಾವೇ ಅಧಿಕಾರಕ್ಕೆ ಬರೋದು ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶದಲ್ಲಿ ಈಗಾಗಲೇ ಮುಳುಗಿದೆ. ಕಾಂಗ್ರೆಸ್ ಜೊತೆ ಹೋಗುವವರು ಮುಳಗಲಿದ್ದೀರಿ, ಹಾಗಾಗಿ ಅವರ ಜೊತೆ ಹೋಗುವುದನ್ನು ನಿಲ್ಲಿಸಿ ಅಂದ್ರು.
ನಮ್ಮದು ಕೆಲಸ ಮಾಡುವ ಸರ್ಕಾರ. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಎಲ್ಲ ಕೆಲಸಗಳನ್ನು ಕಾಂಗ್ರೆಸ್ ಸರ್ಕಾರ ಮಾಡಬಹುದಿತ್ತು ಆದ್ರೆ ಮಾಡಲಿಲ್ಲ. ಜನ್ಧನ್ ಯೋಜನೆಯಲ್ಲಿ ಬ್ಯಾಂಕ್ ನೋಡದವರು ಖಾತೆಗಳನ್ನು ಹೊಂದಿದ್ದಾರೆ. ಇದೇ ವೇಳೆ ಸರ್ಕಾರದ ಯೋಜನೆ ಕಾರ್ಯಕ್ರಮಗಳ ಉದಾಹರಣೆಯನ್ನು ನೀಡುವ ಮೂಲಕ ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…