ರಾಷ್ಟ್ರ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಗೆ 68; ಶುಭ ಹಾರೈಸಿ- ಅಪರೂಪದ ಫೋಟೋಗಳ ಸಂಗ್ರಹ ಇಲ್ಲಿ ನೋಡಿ ಶೇರ್ ಮಾಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 68ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಪೂಜೆ, ಹೋಮ, ಹವನಗಳು ನಡೆಯುತ್ತಿದೆ.

ಪ್ರಧಾನಿ ಮೋದಿ ಅವರು ಸೋಮವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ತೆರಳಿ, ಅಲ್ಲಿ ನಾರೂರ್ ಗ್ರಾಮದ ಪ್ರಾಥಮಿಕ ಶಾಲಾ ಮಕ್ಕಳ ಜೊತೆ ಸಮಯ ಕಳೆಯುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಬಳಿಕ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಏತನ್ಮಧ್ಯೆ ಪ್ರಧಾನಿಯ ಹುಟ್ಟು ಹಬ್ಬ ಇಂದು ಟ್ವೀಟರ್ ಟ್ರೆಂಡಿಂಗ್ ನಲ್ಲಿ ಭರ್ಜರಿ ಸದ್ದು ಮಾಡಿದೆ. ಹ್ಯಾಶ್ ಟ್ಯಾಗ್ #HappyBDayPMModi ಭರ್ಜರಿ ಟ್ರೆಂಡಿಂಗ್ ಆಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ನೀವು ನೂರ್ಕಾಲ ಬಾಳಿ ದೇಶದ ಜನರ ಸೇವೆಯನ್ನು ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.
ಕಾಂಗ್ರೆಸ್ ಪಕ್ಷ ಕೂಡಾ ಟ್ವೀಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದೆ. ಅಲ್ಲದೇ ಭಾರತೀಯ ಜನತಾ ಪಕ್ಷದ ಮುಖಂಡರಾದ ಅಮಿತ್ ಶಾ, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಶ್ ಗೋಯಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಸಾವಿರಾರು ಗಣ್ಯರು ಶುಭ ಹಾರೈಸಿದ್ದಾರೆ.

ಜನಪ್ರಿಯ ನಾಯಕನ ಬಾಲ್ಯ:

1950ರ ಸೆಪ್ಟೆಂಬರ್ 17ರಂದು ಗುಜರಾತ್ ನ (ಅಂದು ಮುಂಬೈ ರಾಜ್ಯಕ್ಕೆ ಸೇರಿತ್ತು) ಮೆಹ್ಸಾನಾ ಜಿಲ್ಲೆಯ ವಡ್ ನಗರದಲ್ಲಿ ನರೇಂದ್ರ ದಾಮೋದರ್ ದಾಸ್ ಮೋದಿ ಅವರು ಜನಿಸಿದ್ದರು. ದಾಮೋದರ್ ದಾಸ್ ಮುಲ್ ಚಾಂದ್ ಮೋದಿ ಹಾಗೂ ಹೀರಾಬೆನ್ ಮೋದಿ ದಂಪತಿಗೆ ಒಟ್ಟು ಆರು ಮಂದಿ ಮಕ್ಕಳು. ಅವರಲ್ಲಿ ಮೂರನೇಯವರೇ ನರೇಂದ್ರ ಮೋದಿ.

ಬಾಲ್ಯದಲ್ಲಿ ಕಷ್ಟದ ದಿನಗಳನ್ನು ಕಳೆದ ಮೋದಿ ಅವರು ಬಾಲ್ಯದಲ್ಲಿ ವಡ್ ನಗರದ ರೈಲ್ವೆ ನಿಲ್ದಾಣದಲ್ಲಿ ಟೀ ಮಾರಾಟ ಮಾಡುವ ಮೂಲಕ ತಂದೆಗೆ ಸಹಾಯ ಮಾಡುತ್ತಿದ್ದರು. 1967ರಲ್ಲಿ ಹೈಯರ್ ಸೆಕೆಂಡರಿ ಎಜುಕೇಶನ್ ಪೂರೈಸಿದ್ದರು. 8ನೇ ವಯಸ್ಸಿಗೆ ಮೋದಿ ರಾಷ್ಟ್ರೀಯ ಸ್ವಯಂ ಸೇವಕ್ ಸಂಘದ ಸಂಪರ್ಕಕ್ಕೆ ಬಂದಿದ್ದರು. ಬಳಿಕ ಸ್ಥಳೀಯ ಆರ್ ಎಸ್ ಎಸ್ ಶಾಖೆಯ ತರಬೇತಿಗೆ ಹೋಗಲು ಆರಂಭಿಸಿದ್ದರು. ಅಲ್ಲಿ ಮೋದಿ ಅವರಿಗೆ ಲಕ್ಷ್ಮಣ್ ರಾವ್ ಇನಾಮಾದಾರ್ ಅವರನ್ನು ಭೇಟಿಯಾಗಿದ್ದರು. ವಕೀಲ ಸಾಹೇಬ್ ಎಂದೇ ಜನಪ್ರಿಯರಾಗಿದ್ದ ಅವರು ಬಾಲ ಸ್ವಯಂಸೇವಕ್ ಆಗಿದ್ದ ಮೋದಿಯವರು ಇಷ್ಟವಾಗಿದ್ದರು. ಈ ಎಲ್ಲಾ ಬೆಳವಣಿಗೆಯ ನಡುವೆಯೇ 1967ರಲ್ಲಿ ಮೋದಿ ಮನೆ ತೊರೆದಿದ್ದರು.

ಸೇವೆಯತ್ತ ಚಿತ್ರ ನೆಟ್ಟಿದ್ದ ಮೋದಿ ಅವರು ಉತ್ತರ, ಈಶಾನ್ಯ ಭಾರದತ್ತ ಮೋದಿ ಅವರು 2 ವರ್ಷಗಳ ಕಾಲ ಸಂಚರಿಸಿದ್ದರು. ಕೋಲ್ಕತಾದಲ್ಲಿ ಸ್ವಾಮಿ ವಿವೇಕಾನಂದ ಅವರು ಸ್ಥಾಪಿಸಿದ್ದ ಆಶ್ರಮಕ್ಕೂ ಭೇಟಿ ನೀಡಿದ್ದರು. ಸ್ವಾಮಿ ವಿವೇಕಾನಂದ ಅವರು ಮೋದಿ ಅವರ ಬಹು ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದ ವ್ಯಕ್ತಿಯಾಗಿದ್ದಾರೆ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

1971ರಲ್ಲಿನ ಭಾರತ ಪಾಕಿಸ್ತಾನ ಯುದ್ಧದ ನಂತರ ಗುಜರಾತ್ ನಲ್ಲಿ ತನ್ನ ಚಿಕ್ಕಪ್ಪನ ಜೊತೆ ಮಾಡುತ್ತಿದ್ದ ಕೆಲಸಕ್ಕೆ ಪೂರ್ಣ ವಿರಾಮ ಹಾಕಿದ ಬಳಿಕ ಆರ್ ಎಸ್ ಎಸ್ ನಲ್ಲಿ ಇಮಾನ್ ದಾರ್ ಅವರ ಗರಡಿಯಲ್ಲಿ ಪೂರ್ಣ ಪ್ರಮಾಣದ ಪ್ರಚಾರಕ್ ಆಗಿ ಕಾರ್ಯನಿರ್ವಹಿಸತೊಡಗಿದ್ದರು.

ಹೀಗೆ ಹಲವಾರು ಏಳು ಬೀಳುಗಳ ನಡುವೆ 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ತದನಂತರ ದೀರ್ಘಕಾಲ ಸಿಎಂ ಗಾದಿಯಲ್ಲಿ ಆಡಳಿತ ನಡೆಸಿದ್ದರು. 2014ರಲ್ಲಿ ಪ್ರಧಾನಿ ಗದ್ದುಗೆ ಏರುವ ಮೂಲಕ ದೇಶ, ವಿದೇಶಗಳಲ್ಲಿ ತನ್ನದೇ ವರ್ಚಸ್ಸಿನ ಮೂಲಕ ಜನಮನ್ನಣೆ ಗಳಿಸಿದ ನಾಯಕನಾಗಿ ಬೆಳೆದಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

8 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

14 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

19 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

24 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

36 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

48 minutes ago