ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಓರ್ವ ಮಾನವ ಸಮೂಹವನ್ನೇ ಹತ್ಯೆಗೈದ ವ್ಯಕ್ತಿ ಹಾಗೂ ಅವರೊಬ್ಬ ಭಯೋತ್ಪಾದಕ ಎಂದು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ಜಾವೇದ್ ರಾಣಾ ವಾಗ್ದಾಳಿ ನಡೆಸಿದ್ದು, ಈ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಇನ್ಸಾನಿಯತ್ ಕಾ ಖಾತಿಲ್, ಟೆರರಿಸ್ಟ್ ಎಂದು ತಮ್ಮ ಭಾಷಣದಲ್ಲಿ ಅವರು ಹೇಳಿದ್ದಾರೆಂದು ತಿಳಿದು ಬಂದಿದೆ. ನಮ್ಮನ್ನು ಭಯೋತ್ಪಾದಕರೆಂದು ಅವರು ಕರೆಯುತ್ತಾರೆ, ಆದರೆ ಅವರೇ ಅತೀದೊಡ್ಡ ಭಯೋತ್ಪಾದಕರು ಹಾಗೂ ಮಾನವತೆಯ ಅತೀದೊಡ್ಡ ಕೊಲೆಗಾರನೆಂದರೆ ನಮ್ಮ ದೇಶದ ಪ್ರಧಾನಿ ಎಂದು ಅವರು ಹೇಳಿದ್ದಾರೆ.
ರಾಣಾ ಅವರು 2002ರ ಗುಜರಾತ್ ದೊಂಬಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. ಶಾಸಕ ರಾಣಾ ಅವರು ಈ ಹಿಂದೆಯೂ ಇದೇ ರೀತಿಯ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರಕಾರ ಸಂವಿಧಾನದ 35ಎ ಮತ್ತು 370ನೇ ವಿಧಿಯನ್ನು ಬದಲಾಯಿಸಿದಲ್ಲಿ ಕಾಶ್ಮೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ ಎಂದು ರಾಣಾ ಈ ತಿಂಗಳ ಆದಿಯಲ್ಲಿ ಹೇಳಿದ್ದರು. ಜಮ್ಮು ಕಾಶ್ಮೀರದ ಸ್ವಾಯತ್ತ ಸ್ವರೂಪವನ್ನು ನಾಶ ಮಾಡುವುದು ಬಿಜೆಪಿ ಮತ್ತು ಆರ್ಎಸ್ಎಸ್ ನ ಅಜೆಂಡಾ ಆಗಿದೆ. ಸಂವಿದಾನದ 35ಎ ಮತ್ತು 370 ವಿಧಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಮುಂದೆ ಸತ್ಯಾಂಶಗಳನ್ನು ತಿರುಚಿ ವಾದ ಮಂಡಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ರಾಣಾ ಆರೋಪಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…