ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಓರ್ವ ಮಾನವ ಸಮೂಹವನ್ನೇ ಹತ್ಯೆಗೈದ ವ್ಯಕ್ತಿ ಹಾಗೂ ಅವರೊಬ್ಬ ಭಯೋತ್ಪಾದಕ ಎಂದು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ಜಾವೇದ್ ರಾಣಾ ವಾಗ್ದಾಳಿ ನಡೆಸಿದ್ದು, ಈ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಇನ್ಸಾನಿಯತ್ ಕಾ ಖಾತಿಲ್, ಟೆರರಿಸ್ಟ್ ಎಂದು ತಮ್ಮ ಭಾಷಣದಲ್ಲಿ ಅವರು ಹೇಳಿದ್ದಾರೆಂದು ತಿಳಿದು ಬಂದಿದೆ. ನಮ್ಮನ್ನು ಭಯೋತ್ಪಾದಕರೆಂದು ಅವರು ಕರೆಯುತ್ತಾರೆ, ಆದರೆ ಅವರೇ ಅತೀದೊಡ್ಡ ಭಯೋತ್ಪಾದಕರು ಹಾಗೂ ಮಾನವತೆಯ ಅತೀದೊಡ್ಡ ಕೊಲೆಗಾರನೆಂದರೆ ನಮ್ಮ ದೇಶದ ಪ್ರಧಾನಿ ಎಂದು ಅವರು ಹೇಳಿದ್ದಾರೆ.
ರಾಣಾ ಅವರು 2002ರ ಗುಜರಾತ್ ದೊಂಬಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. ಶಾಸಕ ರಾಣಾ ಅವರು ಈ ಹಿಂದೆಯೂ ಇದೇ ರೀತಿಯ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರಕಾರ ಸಂವಿಧಾನದ 35ಎ ಮತ್ತು 370ನೇ ವಿಧಿಯನ್ನು ಬದಲಾಯಿಸಿದಲ್ಲಿ ಕಾಶ್ಮೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ ಎಂದು ರಾಣಾ ಈ ತಿಂಗಳ ಆದಿಯಲ್ಲಿ ಹೇಳಿದ್ದರು. ಜಮ್ಮು ಕಾಶ್ಮೀರದ ಸ್ವಾಯತ್ತ ಸ್ವರೂಪವನ್ನು ನಾಶ ಮಾಡುವುದು ಬಿಜೆಪಿ ಮತ್ತು ಆರ್ಎಸ್ಎಸ್ ನ ಅಜೆಂಡಾ ಆಗಿದೆ. ಸಂವಿದಾನದ 35ಎ ಮತ್ತು 370 ವಿಧಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಮುಂದೆ ಸತ್ಯಾಂಶಗಳನ್ನು ತಿರುಚಿ ವಾದ ಮಂಡಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ರಾಣಾ ಆರೋಪಿಸಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…