ಹಾಸನ:ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮುನ್ನಡೆಸುವ ಶಕ್ತಿಯಾಗಿ ನಿಂತಿದ್ದಾರೆ ಎಂದು ನಟಿ, ಬಿಜೆಪಿ ನಾಯಕಿ ಶೃತಿ ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ದೇಶದ ಚುನಾವಣೆ, ಮೋದಿ ಅವರ ಮರು ಆಯ್ಕೆಯನ್ನು ಅನೇಕರು ಬಯಸಿದ್ದಾರೆ. ಮೋದಿ ಅಲೆ ಕಡಿಮೆಯಾಗಿದೆ ಎನ್ನುವುದು ಸುಳ್ಳು. 2014ರಲ್ಲಿದ್ದ ಅಲೆಗಿಂತ ಈ ಬಾರಿ ದೇಶದಲ್ಲಿ ಮೋದಿ ಪರ ಹೆಚ್ಚು ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕದಲ್ಲಿ ಡಾ.ರಾಜಕುಮಾರ್ ಹೆಸರು ಹೇಗೆ ಶಕ್ತಿಯೋ ಹಾಗೇ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಕೂಡ ಒಂದು ಬಲಿಷ್ಠ ಶಕ್ತಿ. ಮೋದಿ ಹೆಸರಲ್ಲೇ ಮೋಡಿ ಇದೆ. ಹೀಗಾಗಿ ನಾವು ಮೋದಿ ಹೆಸರನ್ನು ಎಲ್ಲೆಡೆ ಚಲಾವಣೆ ಮಾಡುತ್ತಿದ್ದೇವೆ. ಮೋದಿ ಅವರು ಪ್ರಧಾನಿಯಾದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶ ಬಹಳಷ್ಟು ಮುಂದೆ ಬಂದಿದೆ. ಜಗತ್ತಿನಲ್ಲಿರುವ ಪ್ರಭಾವಿ ಪ್ರಧಾನಿಗಳ ಪಟ್ಟಿಯಲ್ಲಿ ಮೋದಿ ಅವರೇ ಮೊದಲ ಸ್ಥಾನ ಪಡೆದಿದ್ದಾರೆ ಎಂದು ಪ್ರಧಾನಿಯ ನಾಮ ಬಲ ಗುಣಗಾನ ಮಾಡಿದರು.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ 5 ವರ್ಷ ಸಾಲದು, ಮತ್ತೈದು ವರ್ಷ ಬೇಕು. ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂದರು. ಹಾಗೆಯೇ ರಾಜ್ಯದಲ್ಲಿ ಯಡಿಯೂರಪ್ಪ ಅವರು ಮತ್ತೆ ಸಿಎಂ ಆಗುವುದು ನನಗೂ ಖುಷಿ ವಿಷಯ ಎಂದು ಅಭಿಪ್ರಾಯ ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…