Featured

ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ -Vishwanews24

ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ -Vishwanews24

ಬಳ್ಳಾರಿ: “ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಪ್ರಧಾನಿ ಮೋದಿ ಅವರು ಇಂದು ಅಧೋಗತಿಯತ್ತ ಸಾಗಿಸುತ್ತಿದ್ದಾರೆ. ರೈತಪರ ಹಾಗೂ ಜನಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಾಡು ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ” ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌‌‌. ಉಗ್ರಪ್ಪ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದರು. ಆದರೆ, ಅವರು ನೀಡಿರುವ ಭರವಸೆ ಈಡೇರಿಲ್ಲ. ನೋಟಿ ರದ್ಧತಿಯಿಂದ ಕಪ್ಪು ಹಣದ ಪತ್ತೆ ಕಾರ್ಯವೂ ಆಗಿಲ್ಲ” ಎಂದಿದ್ದಾರೆ.

ಇಂದಿರಾಗಾಂಧಿಯವರ ಅವಧಿಯಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ರಾಜ್ಯದ ಸಾವಿರಾರು ರೈತರ ಬದುಕನ್ನು ಕಾಂಗ್ರೆಸ್ ಸರ್ಕಾರ ಉತ್ತಮಪಡಿಸಿತ್ತು. ಆದರೆ ಈಗ ಕೃಷಿ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಪ್ರಧಾನಿ ಮೋದಿ ರೈತರ ಬದುಕಿನ ಮೇಲೆ ಮರಣ ಶಾಸನ ಬರೆದಿದೆ. ಇಂಥ ಅಮಾನವೀಯ ನಿರ್ಧಾರಗಳ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಯಲಿದೆ. ಅದರ ಸೂಚನೆಯು ದೆಹಲಿ ಮುಷ್ಕರದಲ್ಲೇ ದೊರಕಿದೆ. ನೂರಾರು ರೈತ ಸಂಘಟನೆಗಳು ಮತ್ತು 21 ರಾಜಕೀಯ ಪಕ್ಷಗಳು ನೇತೃತ್ವ ವಹಿಸಿರುವ ಹೋರಾಟದ ಕಾವು ದೇಶದಾದ್ಯಂತ ಹಬ್ಬಿದೆ’ ಎಂದರು.

‘ರಾಜ್ಯ‌ ಮತ್ತು ಕೇಂದ್ರ ಸರ್ಕಾರಗಳೆರಡೂ ಜನವಿರೋಧಿ ನೀತಿಗಳನ್ನೇ ಜಾರಿಗೆ ತರುತ್ತಿವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮೋದಿ ದಾರಿಯಲ್ಲೇ ರೈತರ ವಿರೋಧಿ ಕಾಯ್ದೆಗಳ ಜಾರಿಗೆ ಮುಂದಾಗಿದ್ದಾರೆ. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಜಮೀನುಗಳ ಮಾರಾಟಕ್ಕೆ ಇದ್ದ ಎಲ್ಲ ತಡೆಗಳನ್ನೂ ತೆರವುಗೊಳಿಸಿದ್ದಾರೆ’ ಎಂದು ಆರೋಪಿಸಿದರು.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago