ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದಲ್ಲಿ ಕ್ಯಾಪಿಟಲ್ ಹಿಲ್ ಹಿಂಸಾಚಾರ ಮತ್ತು ರೈತರ ಪ್ರತಿಭಟನೆಯ ಬಗ್ಗೆ ಮೌನವಾಗಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಇಸ್ ಬಾರ್ ಟ್ರಂಪ್ ಸರ್ಕಾರ್’ ಎಂದು ಪ್ರಧಾನಿ ಅಂದು ಹೇಳಿದ್ದನ್ನು ನೆನಪಿಸಿಕೊಳ್ಳಲು ಇಚ್ಛಿಸುತ್ತೇನೆ. ದೇಶದ ಪ್ರಧಾನಿಯಾಗಿದ್ದುಕೊಂಡು ನೀವು ಆ ಹೇಳಿಕೆ ಕೊಡಬಾರದಿತ್ತು. ಆ ಹೇಳಿಕೆ ಅಮೆರಿಕನ್ನರ ಗೌರವಕ್ಕೆ ಚ್ಯುತಿ ತಂದತ್ತಾಗುತ್ತದೆ ಎಂದು ಹೇಳಿದ್ದಾರೆ.
ತಮ್ಮ ದೇಶದ ಅಧ್ಯಕ್ಷನ ಆಯ್ಕೆಯು ಅಮೆರಿಕನ್ನರಿಗೆ ಬಿಟ್ಟ ವಿಚಾರ. ಅದು ಅವರ ಆಯ್ಕೆ, ನಿಮ್ಮದಲ್ಲ. ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ನಿಮಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎನ್ನುವುದು ಅರ್ಥವಾಗುತ್ತದೆ. ಅಷ್ಟೇ ಅಲ್ಲದೆ ದೇಶದ ಅನ್ನದಾತರ ಪ್ರತಿಭಟನೆ ಕುರಿತು ಮೌನವಾಗಿ ಇರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಪುನರುಚ್ಚರಿಸಿದ್ದು, ಕೃಷಿಯನ್ನು ಅವಲಂಬಿಸಿರುವ ಶೇಕಡಾ 60ರಷ್ಟು ಪಂಜಾಬ್, ಹರಿಯಾಣದ ರೈತರು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ನೂತನ ಕೃಷಿ ಕಾಯ್ದೆಯು ರೈತರ ಮೇಲೆ ಮಾತ್ರವಲ್ಲದೆ ಮಧ್ಯಮ ವರ್ಗದ ಮೇಲಿನ ಆಕ್ರಮಣವೂ ಆಗಿದೆ” ಎಂದು ಹೇಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…