Featured

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದಲ್ಲಿ ಕ್ಯಾಪಿಟಲ್ ಹಿಲ್ ಹಿಂಸಾಚಾರ ಮತ್ತು ರೈತರ ಪ್ರತಿಭಟನೆಯ ಬಗ್ಗೆ ಮೌನವಾಗಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಇಸ್​ ಬಾರ್​ ಟ್ರಂಪ್​ ಸರ್ಕಾರ್​​’ ಎಂದು ಪ್ರಧಾನಿ ಅಂದು ಹೇಳಿದ್ದನ್ನು ನೆನಪಿಸಿಕೊಳ್ಳಲು ಇಚ್ಛಿಸುತ್ತೇನೆ. ದೇಶದ ಪ್ರಧಾನಿಯಾಗಿದ್ದುಕೊಂಡು ನೀವು ಆ ಹೇಳಿಕೆ ಕೊಡಬಾರದಿತ್ತು. ಆ ಹೇಳಿಕೆ ಅಮೆರಿಕನ್ನರ ಗೌರವಕ್ಕೆ ಚ್ಯುತಿ ತಂದತ್ತಾಗುತ್ತದೆ ಎಂದು ಹೇಳಿದ್ದಾರೆ.

ತಮ್ಮ ದೇಶದ ಅಧ್ಯಕ್ಷನ ಆಯ್ಕೆಯು ಅಮೆರಿಕನ್ನರಿಗೆ ಬಿಟ್ಟ ವಿಚಾರ. ಅದು ಅವರ ಆಯ್ಕೆ, ನಿಮ್ಮದಲ್ಲ. ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ನಿಮಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎನ್ನುವುದು ಅರ್ಥವಾಗುತ್ತದೆ. ಅಷ್ಟೇ ಅಲ್ಲದೆ ದೇಶದ ಅನ್ನದಾತರ ಪ್ರತಿಭಟನೆ ಕುರಿತು ಮೌನವಾಗಿ ಇರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಪುನರುಚ್ಚರಿಸಿದ್ದು, ಕೃಷಿಯನ್ನು ಅವಲಂಬಿಸಿರುವ ಶೇಕಡಾ 60ರಷ್ಟು ಪಂಜಾಬ್, ಹರಿಯಾಣದ ರೈತರು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ನೂತನ ಕೃಷಿ ಕಾಯ್ದೆಯು ರೈತರ ಮೇಲೆ ಮಾತ್ರವಲ್ಲದೆ ಮಧ್ಯಮ ವರ್ಗದ ಮೇಲಿನ ಆಕ್ರಮಣವೂ ಆಗಿದೆ” ಎಂದು ಹೇಳಿದ್ದಾರೆ.

http://ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಕಾಂಡಮ್‌ ಹಾಗೂ ಅವಹೇಳನಕಾರಿ ಬರಹ ಪತ್ತೆ -Vishwanews24

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

31 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

39 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

47 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

54 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago