ಪ್ರಧಾನಿ ನರೇಂದ್ರ ಮೋದಿ ಬಸವಣ್ಣ ಮತ್ತು ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪಡುಬಿದ್ರೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬ್ಯಾಂಕುಗಳನ್ನು ಜನರ ಮನೆ ಬಾಗಿಲಿಗೆ ತಂದಿತು. ಹಳ್ಳಿಹಳ್ಳಿಗಳಲ್ಲಿ ಬ್ಯಾಂಕ್ ಶಾಖೆಗಳು ತೆರೆದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳಶಾಹಿಗಳು ಬ್ಯಾಂಕ್ಗಳನ್ನು ಲೂಟಿ ಮಾಡಿ ಪಲಾಯನ ಮಾಡುತ್ತಿದ್ದಾರೆ.
ರೈತರ ಸಾಲ ಮನ್ನ ಮಾಡಿ ಎಂದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ವಿತ್ತ ಸಚಿವರು ಹೇಳುತ್ತಾರೆ. ಆದರೆ ಕರ್ನಾಟಕ ರಾಜ್ಯ ರೈತರ 8 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ ಎಂದು ರಾಹುಲ್ ಹೇಳಿದರು.
ಬಿಜೆಪಿ ಎಲ್ಲೆಲ್ಲ ಹೋಗುತ್ತದೊ ಅಲ್ಲಿ ಅದು ಜನರ ನಡುವೆ ಹಗೆತನ ಬೆಳೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬಡ ಕುಟುಂಬಗಳಲ್ಲಿನ ಪ್ರತಿ ವ್ಯಕ್ತಿಗೂ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.
ಒಂದು ಕೋಟಿ ಕುಟುಂಬಗಳಿಗೆ ಇದರಿಂದ ಅನುಕೂಲವಾಗಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಬಿಜೆಪಿ ಸರ್ಕಾರಕ್ಕಿಂತ ಮೂರು ಪಟ್ಟು ಹೆಚ್ಚು ಹಣವನ್ನು ಸಿದ್ದರಾಮಯ್ಯ ಸರ್ಕಾರ ವ್ಯಯಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಭೇದ ಭಾವದ ಮೂಲಕ ಜನರನ್ನು ಬೇರೆ ಮಾಡುವುದಿಲ್ಲ. ದ್ವೇಷ, ಕೋಪವನ್ನು ಜನರ ಮಧ್ಯೆ ಹರಡುವುದಿಲ್ಲ. ಇದು ನಮಗೂ ಮತ್ತು ಬಿಜೆಪಿಗು ಇರುವ ವ್ಯತ್ಯಾಸ ಎಂದು ರಾಹುಲ್ ಗಾಂಧಿ ಹೇಳಿದರು.
ಕಾಂಗ್ರೆಸ್ ಪಕ್ಷ ಕಳೆದ 70 ವರ್ಷಗಳಲ್ಲಿ ಏನು ಮಾಡಿಲ್ಲ ಎಂದು ಹೇಳುವ ಮೂಲಕ ಈ ದೇಶದ ಜನತೆಗೆ ಅವಮಾನ ಮಾಡುತ್ತಿದೆ. ಈ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಮತ್ತು ಬಡ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಎಲ್ಲ ಜನರ ಅವಿರತ ಶ್ರಮದಿಂದ ಭಾರತ ವಿಶ್ವದ ದೊಡ್ಡ ರಾಷ್ಟ್ರಗಳ ಎದುರು ತಲೆ ಎತ್ತಿ ನಿಂತಿದೆ.
ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ದೇಶದ 125 ಕೋಟಿ ಜನರೂ ಸಹ ಇದಕ್ಕೆ ಸಾಥ್ ನೀಡಬೇಕಾಗಿದೆ. ನರೇಂದ್ರ ಮೋದಿ ಈ ದೇಶದ ಜನರ ಬೆವರಿನ ದುಡಿಮೆಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…