ಉಡುಪಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಬಸವಣ್ಣ ಮತ್ತು ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪಡುಬಿದ್ರೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬ್ಯಾಂಕುಗಳನ್ನು ಜನರ ಮನೆ ಬಾಗಿಲಿಗೆ ತಂದಿತು. ಹಳ್ಳಿಹಳ್ಳಿಗಳಲ್ಲಿ ಬ್ಯಾಂಕ್ ಶಾಖೆಗಳು ತೆರೆದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳಶಾಹಿಗಳು ಬ್ಯಾಂಕ್‌ಗಳನ್ನು ಲೂಟಿ ಮಾಡಿ ಪಲಾಯನ ಮಾಡುತ್ತಿದ್ದಾರೆ.

ರೈತರ ಸಾಲ ಮನ್ನ ಮಾಡಿ ಎಂದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ವಿತ್ತ ಸಚಿವರು ಹೇಳುತ್ತಾರೆ. ಆದರೆ ಕರ್ನಾಟಕ ರಾಜ್ಯ ರೈತರ 8 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ ಎಂದು ರಾಹುಲ್ ಹೇಳಿದರು.

 

ಬಿಜೆಪಿ ಎಲ್ಲೆಲ್ಲ ಹೋಗುತ್ತದೊ ಅಲ್ಲಿ ಅದು ಜನರ ನಡುವೆ ಹಗೆತನ ಬೆಳೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬಡ ಕುಟುಂಬಗಳಲ್ಲಿನ ಪ್ರತಿ ವ್ಯಕ್ತಿಗೂ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.

 

ಒಂದು ಕೋಟಿ ಕುಟುಂಬಗಳಿಗೆ ಇದರಿಂದ ಅನುಕೂಲವಾಗಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಬಿಜೆಪಿ ಸರ್ಕಾರಕ್ಕಿಂತ ಮೂರು ಪಟ್ಟು ಹೆಚ್ಚು ಹಣವನ್ನು ಸಿದ್ದರಾಮಯ್ಯ ಸರ್ಕಾರ ವ್ಯಯಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 

ಕಾಂಗ್ರೆಸ್ ಪಕ್ಷ ಭೇದ ಭಾವದ ಮೂಲಕ ಜನರನ್ನು ಬೇರೆ ಮಾಡುವುದಿಲ್ಲ. ದ್ವೇಷ, ಕೋಪವನ್ನು ಜನರ ಮಧ್ಯೆ ಹರಡುವುದಿಲ್ಲ. ಇದು ನಮಗೂ ಮತ್ತು ಬಿಜೆಪಿಗು ಇರುವ ವ್ಯತ್ಯಾಸ ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್ ಪಕ್ಷ ಕಳೆದ 70 ವರ್ಷಗಳಲ್ಲಿ ಏನು ಮಾಡಿಲ್ಲ ಎಂದು ಹೇಳುವ ಮೂಲಕ ಈ ದೇಶದ ಜನತೆಗೆ ಅವಮಾನ ಮಾಡುತ್ತಿದೆ. ಈ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಮತ್ತು ಬಡ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಎಲ್ಲ ಜನರ ಅವಿರತ ಶ್ರಮದಿಂದ ಭಾರತ ವಿಶ್ವದ ದೊಡ್ಡ ರಾಷ್ಟ್ರಗಳ ಎದುರು ತಲೆ ಎತ್ತಿ ನಿಂತಿದೆ.

ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ದೇಶದ 125 ಕೋಟಿ ಜನರೂ ಸಹ ಇದಕ್ಕೆ ಸಾಥ್ ನೀಡಬೇಕಾಗಿದೆ. ನರೇಂದ್ರ ಮೋದಿ ಈ ದೇಶದ ಜನರ ಬೆವರಿನ ದುಡಿಮೆಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago