ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗುವುದು ಖಂಡಿತ : ಸಿದ್ದರಾಮಯ್ಯ
ಬಾಗಲಕೋಟೆ,: ರಫೇಲ್ ಡೀಲ್ ಗೆ ಸಂಬಂಧಿಸಿದ ಅವ್ಯವಹಾರದ ಸತ್ಯಾಂಶ ಶೀಘ್ರದಲ್ಲೇ ಹೊರಬೀಳಲಿದೆ, ಇದರ ಪರಿಣಾಮ ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗುವುದು ಖಂಡಿತಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಳಿ ನಡೆಸಿದರು.
ಬಾಗಲಕೋಟೆಯ ಜಮಖಂಡಿಯಲ್ಲಿ ನಾಳೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಆನಂದ ನ್ಯಾಮಗೌಡ ಪರ ಪ್ರಚಾರ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನುದ್ದೇಸಿಸಿ ಮಾತನಾಡಿದರು.

ಬಿಜೆಪಿ ಗೆ ಮಾತನಾಡಲು ಯಾವುದೇ ಅಭಿವೃದ್ದಿ ಕಾರ್ಯಗಳಿಲ್ಲ..ಹೀಗಾಗಿಯೇ ರಾಮ ಮಂದಿರದ ವಿಷಯವನ್ನು ಮತ್ತೆ ಮತ್ತೆ ಕೆದಕಿ ಅದನ್ನೇ ಮುಂದಿಟ್ಟುಕೊಂಡು ಜನರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಮತಕ್ಕಾಗಿ ಕೋಮು ರಾಜಕೀಯದ ಮೂಲಕ ದೇಶವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿರುವ ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರವಿಡಿ’ ಎಂದು ಅವರು ಕರೆ ನೀಡಿದರು.
ರಫೇಲ್ ಡೀಲ್ ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆಗಳು ಹೊರಬೀಳಲಿವೆ. ಆಗ ಮೋದಿಯವರು ಜೈಲಿಗೆ ಹೋಗುವುದು ಖಂಡಿತ. ಕರ್ನಾಟಕದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೈಲಿಗೆ ಹೋದಂತೆ, ಮೋದಿಯವರೂ ಹೋಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಜಾಹೀರಾತುಗಳು


