ಬಾಗಲಕೋಟೆ,: ರಫೇಲ್ ಡೀಲ್ ಗೆ ಸಂಬಂಧಿಸಿದ ಅವ್ಯವಹಾರದ ಸತ್ಯಾಂಶ ಶೀಘ್ರದಲ್ಲೇ ಹೊರಬೀಳಲಿದೆ, ಇದರ ಪರಿಣಾಮ ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗುವುದು ಖಂಡಿತಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಳಿ ನಡೆಸಿದರು.
ಬಾಗಲಕೋಟೆಯ ಜಮಖಂಡಿಯಲ್ಲಿ ನಾಳೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಆನಂದ ನ್ಯಾಮಗೌಡ ಪರ ಪ್ರಚಾರ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನುದ್ದೇಸಿಸಿ ಮಾತನಾಡಿದರು.
ಬಿಜೆಪಿ ಗೆ ಮಾತನಾಡಲು ಯಾವುದೇ ಅಭಿವೃದ್ದಿ ಕಾರ್ಯಗಳಿಲ್ಲ..ಹೀಗಾಗಿಯೇ ರಾಮ ಮಂದಿರದ ವಿಷಯವನ್ನು ಮತ್ತೆ ಮತ್ತೆ ಕೆದಕಿ ಅದನ್ನೇ ಮುಂದಿಟ್ಟುಕೊಂಡು ಜನರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಮತಕ್ಕಾಗಿ ಕೋಮು ರಾಜಕೀಯದ ಮೂಲಕ ದೇಶವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿರುವ ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರವಿಡಿ’ ಎಂದು ಅವರು ಕರೆ ನೀಡಿದರು.
ರಫೇಲ್ ಡೀಲ್ ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆಗಳು ಹೊರಬೀಳಲಿವೆ. ಆಗ ಮೋದಿಯವರು ಜೈಲಿಗೆ ಹೋಗುವುದು ಖಂಡಿತ. ಕರ್ನಾಟಕದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೈಲಿಗೆ ಹೋದಂತೆ, ಮೋದಿಯವರೂ ಹೋಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಜಾಹೀರಾತುಗಳು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…