ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮಾಜಿ ಸಿಎಂಎಸ್.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನಲೆಯಲ್ಲಿ ಇದೀಗ ಸ್ವತಃ ಎಸ್.ಎಂ.ಕೃಷ್ಣ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಈ ವದಂತಿಗೆ ತೆರೆ ಎಳೆದಿದ್ದಾರೆ.
ಪ್ರಸ್ತುತ ಮುಂಬೈ ನಲ್ಲಿರುವ ಎಸ್.ಎಂ.ಕೃಷ್ಣ ಅವರು ದೂರವಾಣಿ ಮೂಲಕ ಖಾಸಗಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿ,’ ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಹಾಗಾಗಿ ನಾನು ಕಾಂಗ್ರೆಸ್ ಸೇರಲು ಮುಂದಾಗಿದ್ದೇನೆ. ಇದಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದು ಗಾಳಿ ಸುದ್ದಿ.ಇದಕ್ಕೆಲ್ಲ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.
‘ಎಂತಹ ಸಂದರ್ಭದಲ್ಲೂ ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್ಗೆ ಹೋಗುವುದಿಲ್ಲ. ನನ್ನ ಆರೋಗ್ಯ ಸಹಕರಿಸಿದರೆ ಈ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಬಿಜೆಪಿಯಲ್ಲಿ ಎಲ್ಲ ಸರಿ ಇರುವಾಗ ಬೇರೆ ಪಕ್ಷವನ್ನು ಏಕೆ ಸೇರಬೇಕು. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ನೀಡಬೇಕೆಂದು ನಾನಾಗಲಿ ಅಥವಾ ಬೇರೆ ಯಾರೂ ಕೂಡ ಲಾಬಿ ನಡೆಸಿಲ್ಲ. ಅವರವರ ಸಾಮಥ್ರ್ಯಕ್ಕೆ ಅನುಗುಣವಾಗಿ ಪಕ್ಷದ ಮುಖಂಡರು ಟಿಕೆಟ್ ನೀಡುತ್ತಾರೆ. ನಮ್ಮ ಪುತ್ರಿ ಅಥವಾ ಬೇರೆ ಯಾರೇ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೆಲವು ಆಗದವರು ಆಗಾಗ್ಗೆ ಇಂತಹ ವದಂತಿಗಳನ್ನು ಹಬ್ಬಿಸುತ್ತಾರೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ನನಗೆ ಗುಲಗಂಜಿಯಷ್ಟು ಅಪನಂಬಿಕೆ ಇಲ್ಲ’ ಎಂದು ಎಸ್.ಎಂ.ಕೃಷ್ಣ ಅವರು ಸ್ಪಷ್ಟನೆ ನೀಡಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…