ರಾಜ್ಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ನನಗೆ ಗುಲಗಂಜಿಯಷ್ಟು ಅಪನಂಬಿಕೆ ಇಲ್ಲ- ಎಸ್.ಎಂ.ಕೃಷ್ಣ

ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮಾಜಿ ಸಿಎಂಎಸ್.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನಲೆಯಲ್ಲಿ ಇದೀಗ ಸ್ವತಃ ಎಸ್.ಎಂ.ಕೃಷ್ಣ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಈ ವದಂತಿಗೆ ತೆರೆ ಎಳೆದಿದ್ದಾರೆ.
ಪ್ರಸ್ತುತ ಮುಂಬೈ ನಲ್ಲಿರುವ ಎಸ್.ಎಂ.ಕೃಷ್ಣ ಅವರು ದೂರವಾಣಿ ಮೂಲಕ ಖಾಸಗಿ ಸುದ್ದಿ ವಾಹಿನಿಯೊಂದರ ಜೊತೆ  ಮಾತನಾಡಿ,’ ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಹಾಗಾಗಿ ನಾನು ಕಾಂಗ್ರೆಸ್ ಸೇರಲು ಮುಂದಾಗಿದ್ದೇನೆ. ಇದಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದು ಗಾಳಿ ಸುದ್ದಿ.ಇದಕ್ಕೆಲ್ಲ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.

‘ಎಂತಹ ಸಂದರ್ಭದಲ್ಲೂ ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್‍ಗೆ ಹೋಗುವುದಿಲ್ಲ. ನನ್ನ ಆರೋಗ್ಯ ಸಹಕರಿಸಿದರೆ ಈ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಬಿಜೆಪಿಯಲ್ಲಿ ಎಲ್ಲ ಸರಿ ಇರುವಾಗ ಬೇರೆ ಪಕ್ಷವನ್ನು ಏಕೆ ಸೇರಬೇಕು. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ನೀಡಬೇಕೆಂದು ನಾನಾಗಲಿ ಅಥವಾ ಬೇರೆ ಯಾರೂ ಕೂಡ ಲಾಬಿ ನಡೆಸಿಲ್ಲ. ಅವರವರ ಸಾಮಥ್ರ್ಯಕ್ಕೆ ಅನುಗುಣವಾಗಿ ಪಕ್ಷದ ಮುಖಂಡರು ಟಿಕೆಟ್ ನೀಡುತ್ತಾರೆ. ನಮ್ಮ ಪುತ್ರಿ ಅಥವಾ ಬೇರೆ ಯಾರೇ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೆಲವು ಆಗದವರು ಆಗಾಗ್ಗೆ ಇಂತಹ ವದಂತಿಗಳನ್ನು ಹಬ್ಬಿಸುತ್ತಾರೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ನನಗೆ ಗುಲಗಂಜಿಯಷ್ಟು ಅಪನಂಬಿಕೆ ಇಲ್ಲ’ ಎಂದು ಎಸ್.ಎಂ.ಕೃಷ್ಣ ಅವರು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

1 hour ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

2 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago