ಬೆಳಗಾವಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಬೆಳಗಾವಿ ನಗರದ ವಿಟಿಯು ಸಭಾಂಗಣದಲ್ಲಿ ಬುಧವಾರ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಿಸ್ವಾರ್ಥ ಹಾಗೂ ದೇಶ ಪ್ರೇಮಿ ಆಗಿದ್ದರಿಂದ ಎರಡನೇ ಬಾರಿಗೆ ಪ್ರಧಾನಿಯಾಗುವ ಯೋಗ ಅವರನ್ನು ಹುಡುಕಿಕೊಂಡು ಬಂದಿದೆ.
ಅವರಿಗೆ ದೇಶದ ಬಗ್ಗೆ ಸಾಕಷ್ಟುಗೌರವ, ಅಭಿಮಾನ ಇದೆ. ಯಾವಾಗಲೂ ದೇಶದ ಬಗ್ಗೆಯೇ ಚಿಂತಿಸುತ್ತಾರೆ. ನಿಸ್ವಾರ್ಥ ಭಾವದಿಂದ ದೇಶಸೇವೆ ಮಾಡುತ್ತಿದ್ದಾರೆ. ಅವರಿಗೆ ನಾನು ಕೂಡ ಒಬ್ಬ ಸಂಸದ ಎನ್ನುವಷ್ಟರ ಮಟ್ಟಿಗೆ ಸರಳತೆ ಇದೆ. ದೇಶಕ್ಕಾಗಿ ನನ್ನ ಜೀವನ ಎಂಬ ಅವರ ಹೇಳಿಕೆ ನನಗೆ ಇಷ್ಟವಾಗಿದೆ ಎಂದು ಬಣ್ಣಿಸಿದರು.
ಮೈತ್ರಿ ಸರ್ಕಾರವನ್ನು ಅತಂತ್ರಗೊಳಿಸುವ ಉದ್ದೇಶ ಪ್ರಧಾನಿ ಮೋದಿ ಅವರಿಗಿಲ್ಲ. ಲೋಕಸಭೆ ಚುನಾವಣೆ ನಂತರ ತಮ್ಮ ಭಾಷಣದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಮೋದಿ ಹೇಳಿದ್ದಾರೆ ಎಂದರು. ಮೋದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದೇನೆ ಹೊರತು, ಬಿಜೆಪಿ ಸೇರುವ ಉದ್ದೇಶದಿಂದ ಹೇಳಿಲ್ಲ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…