Featured

ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರಕ್ಕೆ ರಾಜ್ಯಾದ್ಯಂತ ‘ಟೀಂ ಮೋದಿ’ ಸಜ್ಜು..

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ಸಜ್ಜಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸಲು ಚಕ್ರವರ್ತಿ ನೇತೃತ್ವದ  ‘ಟೀಂ ಮೋದಿ’ ಸಿದ್ಧವಾಗಿದೆ. ಮೋದಿ ಸರಕಾರ 5 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದು, ಈಗ 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಟೀಂ ಮೋದಿ ಕಾರ್ಯಾರಂಭಿಸಿದೆ.

ಈ ವೇಳೆ ಟೀಂ ಮೋದಿ ಸಂಘಟಕ ಸುನೀಲ ಸಕ್ರೀ ಮಾತನಾಡಿ, ಪ್ರಧಾನಿ ಮೋದಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿ ನಾಯಕರಾಗಿದ್ದಾರೆ. ಆದರೆ, ಅವರು ಪ್ರಧಾನಿಯಾದ ಬಳಿಕ ದೇಶದಲ್ಲಾದ ಹಲವು ಬದಲಾವಣೆಗಳು ಜನರ ಕಣ್ಣಿಗೆ ಕಾಣದಿರುವಂತೆ ಮಾಡಲು ಅನೇಕ ರಾಜಕೀಯ ಪಕ್ಷಗಳು ಕುತಂತ್ರದಿಂದ ಆರೋಪ ಮಾಡುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಿ, ಜನಪರ ಯೋಜನೆಗಳನ್ನು ಜನರ ಬಳಿ ತೆರೆದಿಡುವ ಉದ್ದೇಶದಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರಂತಲ್ಲದೆ, ವಿಭಿನ್ನವಾಗಿ ಮೂರನೇ ವ್ಯಕ್ತಿಯಾಗಿ ಚುನಾವಣಾ ಪ್ರಚಾರದ ಉದ್ದೇಶ ಟೀಂ ಮೋದಿ ಹೊಂದಿದೆ ಎಂದ ಅವರು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ ಧ್ಯೇಯಕ್ಕೆ ಬದ್ದವಾಗಿರುವ ಮೋದಿ ದೇಶದ 135 ಹಿಂದುಳಿದ ಜಿಲ್ಲೆಗಳಲ್ಲಿ 2022ರ ಹೊತ್ತಿಗೆ ಮಹತ್ವದ ಬದಲಾವಣೆ ತರುವ ಸಂಕಲ್ಪ ಮಾಡಿದ್ದಾರೆ ಎಂದರು..

ಟೀಂ ಮೋದಿಗೆ ಚಾಲನೆ 
‘ಟೀಂ ಮೋದಿ’ ಸಂಘಟನೆಗೆ ರವಿವಾರ ರಾಜ್ಯಾದ್ಯಂತ ಬೈಕ್‌ ಜಾಥಾ ಮೂಲಕ ಚಾಲನೆ ಸಿಕ್ಕಿದೆ. ಉಡುಪಿ, ಮಂಗಳೂರು, ಮೈಸೂರು, ಯಾದಗಿರಿ, ಮುಂಡಗೋಡು, ನೆಲಮಂಗಲ ಸಹಿತ ರಾಜ್ಯದ 357 ಕಡೆಗಳಲ್ಲಿ ಬೈಕ್‌ ಜಾಥಾ ಮೂಲಕ ಮೋದಿಯವರ ಸಾಧನೆಯ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಡೆದಿದೆ. ಎಲ್ಲೆಲ್ಲಿ ಬೈಕ್‌ ಜಾಥಾಗೆ ಅವಕಾಶ ಸಿಕ್ಕಿಲ್ಲವೋ ಅಲ್ಲಿ ಪಾದಯಾತ್ರೆ ಮೂಲಕ ಟೀಂ ಮೋದಿ ಕಾರ್ಯಾರಂಭಿಸಿದೆ. ಪಾದಯಾತ್ರೆಗೂ ಅವಕಾಶ ನೀಡದ ಕಡೆಗಳಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ‘ಟೀಂ ಮೋದಿ’ ಕಾಯಕ ಆರಂಭಿಸಿದೆ.

Vishwa News 24

Recent Posts

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

6 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

16 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

32 minutes ago

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

45 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

57 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

1 hour ago