Featured

ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರಕ್ಕೆ ರಾಜ್ಯಾದ್ಯಂತ ‘ಟೀಂ ಮೋದಿ’ ಸಜ್ಜು..

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ಸಜ್ಜಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸಲು ಚಕ್ರವರ್ತಿ ನೇತೃತ್ವದ  ‘ಟೀಂ ಮೋದಿ’ ಸಿದ್ಧವಾಗಿದೆ. ಮೋದಿ ಸರಕಾರ 5 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದು, ಈಗ 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಟೀಂ ಮೋದಿ ಕಾರ್ಯಾರಂಭಿಸಿದೆ.

ಈ ವೇಳೆ ಟೀಂ ಮೋದಿ ಸಂಘಟಕ ಸುನೀಲ ಸಕ್ರೀ ಮಾತನಾಡಿ, ಪ್ರಧಾನಿ ಮೋದಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿ ನಾಯಕರಾಗಿದ್ದಾರೆ. ಆದರೆ, ಅವರು ಪ್ರಧಾನಿಯಾದ ಬಳಿಕ ದೇಶದಲ್ಲಾದ ಹಲವು ಬದಲಾವಣೆಗಳು ಜನರ ಕಣ್ಣಿಗೆ ಕಾಣದಿರುವಂತೆ ಮಾಡಲು ಅನೇಕ ರಾಜಕೀಯ ಪಕ್ಷಗಳು ಕುತಂತ್ರದಿಂದ ಆರೋಪ ಮಾಡುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಿ, ಜನಪರ ಯೋಜನೆಗಳನ್ನು ಜನರ ಬಳಿ ತೆರೆದಿಡುವ ಉದ್ದೇಶದಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರಂತಲ್ಲದೆ, ವಿಭಿನ್ನವಾಗಿ ಮೂರನೇ ವ್ಯಕ್ತಿಯಾಗಿ ಚುನಾವಣಾ ಪ್ರಚಾರದ ಉದ್ದೇಶ ಟೀಂ ಮೋದಿ ಹೊಂದಿದೆ ಎಂದ ಅವರು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ ಧ್ಯೇಯಕ್ಕೆ ಬದ್ದವಾಗಿರುವ ಮೋದಿ ದೇಶದ 135 ಹಿಂದುಳಿದ ಜಿಲ್ಲೆಗಳಲ್ಲಿ 2022ರ ಹೊತ್ತಿಗೆ ಮಹತ್ವದ ಬದಲಾವಣೆ ತರುವ ಸಂಕಲ್ಪ ಮಾಡಿದ್ದಾರೆ ಎಂದರು..

ಟೀಂ ಮೋದಿಗೆ ಚಾಲನೆ 
‘ಟೀಂ ಮೋದಿ’ ಸಂಘಟನೆಗೆ ರವಿವಾರ ರಾಜ್ಯಾದ್ಯಂತ ಬೈಕ್‌ ಜಾಥಾ ಮೂಲಕ ಚಾಲನೆ ಸಿಕ್ಕಿದೆ. ಉಡುಪಿ, ಮಂಗಳೂರು, ಮೈಸೂರು, ಯಾದಗಿರಿ, ಮುಂಡಗೋಡು, ನೆಲಮಂಗಲ ಸಹಿತ ರಾಜ್ಯದ 357 ಕಡೆಗಳಲ್ಲಿ ಬೈಕ್‌ ಜಾಥಾ ಮೂಲಕ ಮೋದಿಯವರ ಸಾಧನೆಯ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಡೆದಿದೆ. ಎಲ್ಲೆಲ್ಲಿ ಬೈಕ್‌ ಜಾಥಾಗೆ ಅವಕಾಶ ಸಿಕ್ಕಿಲ್ಲವೋ ಅಲ್ಲಿ ಪಾದಯಾತ್ರೆ ಮೂಲಕ ಟೀಂ ಮೋದಿ ಕಾರ್ಯಾರಂಭಿಸಿದೆ. ಪಾದಯಾತ್ರೆಗೂ ಅವಕಾಶ ನೀಡದ ಕಡೆಗಳಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ‘ಟೀಂ ಮೋದಿ’ ಕಾಯಕ ಆರಂಭಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago