Featured

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ : 15 ಪ್ರಮುಖ ಒಪ್ಪಂದಗಳಿಗೆ ಸಹಿ -Vishwanews24

ವ್ಲಾದಿವೊಸ್ಟಾಕ್: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೊದಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ವೇಳೆ ಉಭಯ ದೇಶಗಳ ನಡುವೆ ರಕ್ಷಣಾ ತಂತ್ರಜ್ಞಾನ ಸಹಕಾರ, ಇಂಧನ ಪೂರೈಕೆ ಸೇರಿದಂತೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಪ್ರಮುಖವಾಗಿ ಭಾರತದ 20 ಕಡೆ ಅಣು ಸ್ಥಾವರ ಸ್ಥಾಪನೆ ಮಾಡುವ ಒಪ್ಪಂದಕ್ಕೆ ರಷ್ಯಾ ಸಹಿ ಹಾಕಿದ್ದು, ಇದಲ್ಲದೆ ರಕ್ಷಣೆ, ಶಿಕ್ಷಣ ಸೇರಿ 15 ಒಡಂಬಡಿಕೆಗಳಿಗೆ ಏರ್ಪಟ್ಟಿವೆ.

ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆ, ಕೊಲ್ಲಿ ರಾಷ್ಟ್ರಗಳ ಬಿಕ್ಕಟ್ಟಿನ ಬಗ್ಗೆಯೂ ಚರ್ಚೆ ನಡೆಸಿದರು. ಈ ವೇಳೆ 2019-2024ರವರೆಗೆ ತೈಲ, ನೈಸರ್ಗಿಕ ಅನಿಲ ಪರಿಶೊಧನೆ ಮತ್ತು ಖರೀದಿ ಕುರಿತಂತೆ ಐದು ವರ್ಷಗಳ ಮಾರ್ಗಸೂಚಿ ರೂಪಿಸುವ ಕುರಿತು ಉಭಯ ಮುಖಂಡರು ಮಾತುಕತೆ ನಡೆಸಿದರು.

ವಾಣಿಜ್ಯ, ಹೂಡಿಕೆ, ಗಣಿ, ಪರಮಾಣು ಇಂಧನ, ರಕ್ಷಣೆ ಮತ್ತು ಭದ್ರತೆ, ವಾಯು ಮತ್ತು ಸಮುದ್ರ ಮಾರ್ಗ ಸಂಪರ್ಕ, ಸಾರಿಗೆ ವ್ಯವಸ್ಥೆಯಲ್ಲಿ ಮೂಲಸೌಕರ್ಯ ಹೆಚ್ಚಳ, ಬಾಹ್ಯಾಕಾಶ, ಉಭಯ ದೇಶಗಳ ಜನರ ಸಂಪರ್ಕ ಕುರಿತೂ ಮಾತುಕತೆ ನಡೆಸಿದರು.

 

Vishwa News 24

Recent Posts

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

3 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

8 minutes ago

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…

13 minutes ago

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

18 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

19 hours ago