ಬೆಂಗಳೂರು:ನೆರೆಯಿಂದ ಜನರ ಕಷ್ಟ ಕೇಳಲು ಪ್ರಧಾನಿ ಮೋದಿಯವರಿಗೆ ಸಮಯವಾಗಿಲ್ಲ. ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲಾಗದಷ್ಟು ನಮ್ಮ ಮುಖ್ಯಮಂತ್ರಿಗಳು ದುರ್ಬಲವಾಗಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸರಣಿ ಟ್ವೀಟ್ಗಳ ಮೂಲಕ ಬಿಜೆಪಿ ಸರ್ಕಾರವನ್ನು ಮತ್ತು ನಾಯಕರನ್ನು ತರಾಟೆಗೆತೆಗೆದುಕೊಂಡಿದ್ದಾರೆ.ಚಂದ್ರಯಾನ-2 ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದು ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ.
ಆದರೆ ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು ಮತ್ತು ಮಕ್ಕಳತ್ತ ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ ಎಂದಿದ್ದಾರೆ.
ಕೇಂದ್ರಸರ್ಕಾರದಿಂದ ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದುರ್ಬಲರಾಗಿರುವುದು ರಾಜ್ಯದ ದುರ್ದೈವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬಡವರ ಕಷ್ಟಗಳನ್ನು ಕೇಳಿ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಸಂದರ್ಭದಲ್ಲಿ ಬೆಂಗಳೂರು ನಗರ ಪರಿವೀಕ್ಷಣೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…