Featured

ಪ್ರಧಾನಿ ಬಳಿ ಪರಿಹಾರ ಕೇಳಲಾಗದ ದುರ್ಬಲ ಸಿಎಂ : ಎಚ್.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು:ನೆರೆಯಿಂದ ಜನರ ಕಷ್ಟ ಕೇಳಲು ಪ್ರಧಾನಿ ಮೋದಿಯವರಿಗೆ ಸಮಯವಾಗಿಲ್ಲ. ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲಾಗದಷ್ಟು ನಮ್ಮ ಮುಖ್ಯಮಂತ್ರಿಗಳು ದುರ್ಬಲವಾಗಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್‍ಗಳ ಮೂಲಕ ಬಿಜೆಪಿ ಸರ್ಕಾರವನ್ನು ಮತ್ತು ನಾಯಕರನ್ನು ತರಾಟೆಗೆತೆಗೆದುಕೊಂಡಿದ್ದಾರೆ.ಚಂದ್ರಯಾನ-2 ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದು ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ.

ಆದರೆ ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು ಮತ್ತು ಮಕ್ಕಳತ್ತ ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ ಎಂದಿದ್ದಾರೆ.

ಕೇಂದ್ರಸರ್ಕಾರದಿಂದ ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದುರ್ಬಲರಾಗಿರುವುದು ರಾಜ್ಯದ ದುರ್ದೈವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬಡವರ ಕಷ್ಟಗಳನ್ನು ಕೇಳಿ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಸಂದರ್ಭದಲ್ಲಿ ಬೆಂಗಳೂರು ನಗರ ಪರಿವೀಕ್ಷಣೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago