ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೆ ಪ್ರಬಲ ಎದುರಾಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಎಚ್.ಡಿ. ದೇವೇಗೌಡ ಅವರ ರಾಜಕೀಯ ಅನುಭವವನ್ನು ಗಮನಿಸಿದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ದೇವೇಗೌಡರೆ ಪರ್ಯಾಯ ನಾಯಕ ಎಂಬುದಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ. ದೇವೇಗೌಡರೆ ಏಕೆ ಮುಂದಿನ ಪ್ರಧಾನಿಯಾಗಬಾರದು ಎಂದು ಪ್ರಶ್ನಿಸಿದರು.
ಇದೀಗ ಪ್ರಾಂತಿಯ ಪಕ್ಷಗಳು ಒಟ್ಟಾಗಿ ದೇಶದ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಪ್ರಾಂತಿಯ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಳ ಪ್ರಾಬಲ್ಯವಿದೆ.ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.
ಪ್ರಾದೇಶಿಕ ಪಕ್ಷಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುತ್ತದೆ. ಹಾಗಾಗಿ ಅವರು ಅತ್ಯಂತ ಪರಿಣಾಮಕಾರಿಯಾಗಿ ಆ ಸಮಸ್ಯೆ ಬಗೆಹರಿಸುತ್ತಾರೆ. ಇದೇ ಕಾರಣಕ್ಕೆ ಕಾವೇರಿ ಸಮಸ್ಯೆ ಉದ್ಬವವಾದಾಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಹುಡುಕಿಕೊಂಡು ಬಂದರು. ಸ್ಥಳೀಯ ಸಮಸ್ಯೆಗಳ ಕುರಿತು ಪ್ರಾಂತೀಯ ಪಕ್ಷಗಳಿಗಿರುವ ಆಳವಾದ ಅರಿವನ್ನು ಗಮನಿಸಿಯೆ ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಒಗ್ಗೂಡಿ ದೇಶದ ಆಡಳಿತ ಚಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ಎಚ್.ಡಿ.ದೇವೇಗೌಡ ಅವರಿಗೆ ಇದೆ. ಹಾಗಾಗಿ ಇವರೆ ಹಾಲಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪ್ರಬಲ ಎದುರಾಳಿ ಆಗಲಿದ್ದಾರೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…