ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೆ ಪ್ರಬಲ ಎದುರಾಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಎಚ್.ಡಿ. ದೇವೇಗೌಡ ಅವರ ರಾಜಕೀಯ ಅನುಭವವನ್ನು ಗಮನಿಸಿದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ದೇವೇಗೌಡರೆ ಪರ್ಯಾಯ ನಾಯಕ ಎಂಬುದಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ. ದೇವೇಗೌಡರೆ ಏಕೆ ಮುಂದಿನ ಪ್ರಧಾನಿಯಾಗಬಾರದು ಎಂದು ಪ್ರಶ್ನಿಸಿದರು.
ಇದೀಗ ಪ್ರಾಂತಿಯ ಪಕ್ಷಗಳು ಒಟ್ಟಾಗಿ ದೇಶದ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಪ್ರಾಂತಿಯ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಳ ಪ್ರಾಬಲ್ಯವಿದೆ.ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.
ಪ್ರಾದೇಶಿಕ ಪಕ್ಷಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುತ್ತದೆ. ಹಾಗಾಗಿ ಅವರು ಅತ್ಯಂತ ಪರಿಣಾಮಕಾರಿಯಾಗಿ ಆ ಸಮಸ್ಯೆ ಬಗೆಹರಿಸುತ್ತಾರೆ. ಇದೇ ಕಾರಣಕ್ಕೆ ಕಾವೇರಿ ಸಮಸ್ಯೆ ಉದ್ಬವವಾದಾಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಹುಡುಕಿಕೊಂಡು ಬಂದರು. ಸ್ಥಳೀಯ ಸಮಸ್ಯೆಗಳ ಕುರಿತು ಪ್ರಾಂತೀಯ ಪಕ್ಷಗಳಿಗಿರುವ ಆಳವಾದ ಅರಿವನ್ನು ಗಮನಿಸಿಯೆ ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಒಗ್ಗೂಡಿ ದೇಶದ ಆಡಳಿತ ಚಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ಎಚ್.ಡಿ.ದೇವೇಗೌಡ ಅವರಿಗೆ ಇದೆ. ಹಾಗಾಗಿ ಇವರೆ ಹಾಲಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪ್ರಬಲ ಎದುರಾಳಿ ಆಗಲಿದ್ದಾರೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…