Featured

ಪ್ರಧಾನಿ ಮೋದಿಗೆ ದೇವೇಗೌಡರೆ ಪ್ರಬಲ ಎದುರಾಳಿ ; ಅವರೇ ಏಕೆ ಮುಂದಿನ ಪ್ರಧಾನಿಯಾಗಬಾರದು?: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೆ ಪ್ರಬಲ ಎದುರಾಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಎಚ್.ಡಿ. ದೇವೇಗೌಡ ಅವರ ರಾಜಕೀಯ ಅನುಭವವನ್ನು ಗಮನಿಸಿದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ದೇವೇಗೌಡರೆ ಪರ್ಯಾಯ ನಾಯಕ ಎಂಬುದಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ. ದೇವೇಗೌಡರೆ ಏಕೆ ಮುಂದಿನ ಪ್ರಧಾನಿಯಾಗಬಾರದು ಎಂದು ಪ್ರಶ್ನಿಸಿದರು.

ಇದೀಗ ಪ್ರಾಂತಿಯ ಪಕ್ಷಗಳು ಒಟ್ಟಾಗಿ ದೇಶದ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಪ್ರಾಂತಿಯ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಳ ಪ್ರಾಬಲ್ಯವಿದೆ.ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.

ಪ್ರಾದೇಶಿಕ ಪಕ್ಷಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುತ್ತದೆ. ಹಾಗಾಗಿ ಅವರು ಅತ್ಯಂತ ಪರಿಣಾಮಕಾರಿಯಾಗಿ ಆ ಸಮಸ್ಯೆ ಬಗೆಹರಿಸುತ್ತಾರೆ. ಇದೇ ಕಾರಣಕ್ಕೆ ಕಾವೇರಿ ಸಮಸ್ಯೆ ಉದ್ಬವವಾದಾಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಹುಡುಕಿಕೊಂಡು ಬಂದರು. ಸ್ಥಳೀಯ ಸಮಸ್ಯೆಗಳ ಕುರಿತು ಪ್ರಾಂತೀಯ ಪಕ್ಷಗಳಿಗಿರುವ ಆಳವಾದ ಅರಿವನ್ನು ಗಮನಿಸಿಯೆ ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಒಗ್ಗೂಡಿ ದೇಶದ ಆಡಳಿತ ಚಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ಎಚ್.ಡಿ.ದೇವೇಗೌಡ ಅವರಿಗೆ ಇದೆ. ಹಾಗಾಗಿ ಇವರೆ ಹಾಲಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪ್ರಬಲ ಎದುರಾಳಿ ಆಗಲಿದ್ದಾರೆ ಎಂದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

2 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

2 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

3 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

6 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

6 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

6 hours ago