ಕೊಲ್ಕತ್ತ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಹಾಗೂ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ನಮ್ಮ ಮುಖ್ಯ ಗುರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿ ಹುದ್ದೆಯಿಂದ ಮೋದಿಯನ್ನು ಕೆಳಗಿಳಿಸಲು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ರೈತರನ್ನು ಒಗ್ಗೂಡಿಸುವುದಾಗಿ ಇದೇ ವೇಳೆ ಅವರು ಹೇಳಿಕೊಂಡಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ.
ರೈತರ ಚಳವಳಿಯೂ ಕೇವಲ ಪಂಜಾಬ್ ,ಹರ್ಯಾಣ ಅಥವಾ ಉತ್ತರ ಪ್ರದೇಶಕ್ಕೆ ಸೀಮಿತವಲ್ಲ ಎಂದು ತಿಳಿದುಕೊಳ್ಳಬೇಕು. ಪಶ್ಚಿಮ ಬಂಗಾಳ ಸರ್ಕಾರ ಯಾವತ್ತಿಗೂ ರೈತರ ಪರವಾಗಿ ಇರುತ್ತದೆ. ಈ ಚಳವಳಿ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಇಂದಿನಿಂದ ನನ್ನ ಗುರಿ, ಕೇಂದ್ರದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೀತಿ ನಿರೂಪಣೆಗಳ ಬಗ್ಗೆ ರಾಜ್ಯಗಳು ಮಾತನಾಡಬೇಕು, ಆಗುತ್ತಿರುವ ಅನ್ಯಾಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಧ್ವನಿಯೆತ್ತಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…