ಕೊಲ್ಕತ್ತ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಹಾಗೂ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ನಮ್ಮ ಮುಖ್ಯ ಗುರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿ ಹುದ್ದೆಯಿಂದ ಮೋದಿಯನ್ನು ಕೆಳಗಿಳಿಸಲು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ರೈತರನ್ನು ಒಗ್ಗೂಡಿಸುವುದಾಗಿ ಇದೇ ವೇಳೆ ಅವರು ಹೇಳಿಕೊಂಡಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ.
ರೈತರ ಚಳವಳಿಯೂ ಕೇವಲ ಪಂಜಾಬ್ ,ಹರ್ಯಾಣ ಅಥವಾ ಉತ್ತರ ಪ್ರದೇಶಕ್ಕೆ ಸೀಮಿತವಲ್ಲ ಎಂದು ತಿಳಿದುಕೊಳ್ಳಬೇಕು. ಪಶ್ಚಿಮ ಬಂಗಾಳ ಸರ್ಕಾರ ಯಾವತ್ತಿಗೂ ರೈತರ ಪರವಾಗಿ ಇರುತ್ತದೆ. ಈ ಚಳವಳಿ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಇಂದಿನಿಂದ ನನ್ನ ಗುರಿ, ಕೇಂದ್ರದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೀತಿ ನಿರೂಪಣೆಗಳ ಬಗ್ಗೆ ರಾಜ್ಯಗಳು ಮಾತನಾಡಬೇಕು, ಆಗುತ್ತಿರುವ ಅನ್ಯಾಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಧ್ವನಿಯೆತ್ತಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…