Featured

ಪ್ರಧಾನಿ ಮೋದಿಯವರಿಂದಾಗಿ ಚುನಾವಣೆ ಗೆದ್ದ ಬಿಜೆಪಿ ಸಂಸದರು : ಚಕ್ರವರ್ತಿ ಸೂಲಿಬೆಲೆ -Vishwanews24

ಬೆಂಗಳೂರು: ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದವರೂ ನಲವತ್ತೇ ಸಾವಿರ ಮತಗಳ ಅಂತರದಿಂದ ಗೆದ್ದವರು ಎಲ್ಲರೂ ಮೋದಿ ಮತಭಿಕ್ಷೆಯ ಫಲಾನುಭವಿಗಳೇ ಇದನ್ನು ಅರಿತುಕೊಂಡು ಸಂಸದರು ಕೆಲಸ ಮಾಡಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಬಿಜೆಪಿ ಸಂಸದರ ವಿರುದ್ಧ ಚಾಟಿ ಬೀಸಿದ್ದಾರೆ.
ಈ ಸಂಬಂಧ ತಮ್ಮ ಫೇಸ್ ಬುಕ್ ಪೋಸ್ಚ್ ನಲ್ಲಿ ಬರೆದುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಮೋದಿ ಒಬ್ಬರು ಇಲ್ಲದೇ ಹೋಗಿದ್ದರೆ ಕರ್ನಾಟಕದ ಬಹುತೇಕ ಸಂಸದರ ಪರಿಸ್ಥಿತಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್ ಮುನಿಯಪ್ಪನವರಿಗಿಂತಲೂ ಭಿನ್ನವಾಗಿರುತ್ತಿರಲಿಲ್ಲ. ಸೋಲು ಹೀನಾಯವಾಗಿರುತ್ತಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಗೆಲುವು ಮೋದಿಯ ಹೆಸರಿಗೆ ಮಾತ್ರವಲ್ಲ, ಅವರು ಮಾಡಿದ ಕೆಲಸಕ್ಕೆ, ತೆಗೆದುಕೊಂಡ ನಿರ್ಣಯಗಳಿಗೆ ಹಾಗೂ ರಾಷ್ಟ್ರಹಿತಕ್ಕೆ ಬದ್ಧವಾದ ಅವರ ಬದುಕಿನ ರೀತಿ ನೀತಿಗಳಿಂದಾಗಿ ಕರ್ನಾಟಕದ ಸಂಸದರಿಗೆ ಗೆಲುವು ಸಿಕ್ಕಿತು. ಹೀಗಾಗಿ ತಮ್ಮದಲ್ಲದ ಗೆಲುವಿಗೆ ಧಿಮಾಕಿನಿಂದ ಸಂಭ್ರಮಿಸುವ ಬದಲು ಮಾಡಬೇಕಾಗಿರುವ ಕೆಸಲವನ್ನು ಮಾಡಬೇಕು.
ತಮ್ಮ ಕ್ಷೇತ್ರದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು, ಮೈಗಳ್ಳತನ ಬಿಟ್ಟು ಕೆಲಸ ಮಾಡಬೇಕು,. ಇತ್ತೀಚೆಗೆ ಸದಾನಂದಗೌಡ ಜಾತಿ ಹೆಸರು ಹೇಳಿಕೊಂಡು ಸಾಂಪ್ರದಾಯಿಕ ರಾಜಕಾರಣಕ್ಕೆ ಮತ್ತೆ ಅಡಿ ಇಡುತ್ತಿದ್ದಾರೆ ಹಾಗೆಯೇ ಎಮರ್ಜೆನ್ಸಿ ಆಸ್ಪತ್ರೆಗಾಗಿ ಉತ್ತರ ಕನ್ನಡದ ಜನ ಹೋರಾಟ ನಡೆಸುತ್ದಿದ್ದಾರೆ, ಅದಕ್ಕಾಗಿ ಅನಂತ್ ಕುಮಾರ್ ಹೆಗಡೆ ಭೇಟಿ ಮಾಡಿ ಮನವಿ ಸಲ್ಲಿಸಿದರು, ಈ ವೇಳೆ ಪ್ರತಿಕ್ರಿಯಿಸಿರುವ ಅನಂತ್ ಕುಮಾರ್ ಹೆಗಡೆ ರಾಜ್ಯಕ್ಕೆ ಸೇರಿರುವ ಕೆಲಸ ತಾನು ಮಾಡುವುದಿಲ್ಲ ಎಂದು ಹೇಳಿದ್ದಾರೆ,

ಮೋದಿ ಮುಖ ನೋಡಿ ಜನರು ರಾಜ್ಯದಲ್ಲಿ 25 ಸ್ಥಾನಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ಸಂಸದರು ಜನರಿಗೆ ಪೂರಕವಾಗಿ ಕೆಲಸ ಮಾಡಬೇಕು. ಯಾರೂ ಸ್ಪಷ್ಟವಾಗಿ ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇನೆಂದು ಹೇಳಲು ಅರ್ಹರಿಲ್ಲ. ಜಾತಿ ಬೆಂಬಲದಿಂದ ಗೆದ್ದಿದ್ದೇನೆಂದರೆ ಮತದಾರರು ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡರಿಗೆ ಸೂಲಿಬೆಲೆ ತಿರುಗೇಟು ನೀಡಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago