Featured

ಪ್ರಧಾನಿ ಮೋದಿಯವರ ಆಡಳಿತದಿಂದ ಭಾರತ ಪ್ರಭಾವಿಶಾಲಿ ಎಂದು ಗುರುತಿಸಿಕೊಂಡಿದೆ : ಚಕ್ರವರ್ತಿ ಸೂಲಿಬೆಲೆ – Vishwanews24

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಭಾರತ ಪ್ರಭಾವಿಶಾಲಿ ಎಂದು ಗುರುತಿಸಿಕೊಂಡಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರದ ಪುಲ್ವಾಮ ಘಟನೆಯ ಬಳಿಕ ವಿಶ್ವಸಂಸ್ಥೆಯ 14 ರಾಷ್ಟ್ರಗಳ ಸೆಕ್ಯುರಿಟಿ ಕೌನ್ಸಿಲ್‌ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡುವ ಮೂಲಕ ಮೋದಿಯ ಪ್ರಭಾವವನ್ನು ಜಗತ್ತು ಒಪ್ಪಿಕೊಂಡಂತಾಗಿದೆ ಎಂದು ಟೀಂ ಮೋದಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಕುಂದಾಪುರದಲ್ಲಿ ಟೀಮ್ ಮೋದಿ ಕುಂದಾಪುರ ಆಯೋಜಿಸಿದ ’ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ದೇಶದ ಸಾರ್ವಭೌಮತೆಯನ್ನು ಉಳಿಸಿಕೊಳ್ಳಲು, ಜಾಗತಿಕ ಮಟ್ಟದಲ್ಲಿ ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ನಿರೂಪಿಸಲು ಮೋದಿಯಂಥಹ ದೇಶ ಭಕ್ತರು ಬೇಕು. ಈ ದೇಶದ ಜನತೆ ಮತ್ತೆ ಮೋದಿಯವರನ್ನು ಬೆಂಬಲಿಸಲಿದ್ದಾರೆ. ಮೋದಿಜಿಯವರ ಆಡಳಿತ ವ್ಯವಸ್ಥೆಯಲ್ಲಿ ಭಾರತ ಸಾಧಿಸಿರುವ ಮಹತ್ವದ ಮೈಲಿಗಲ್ಲು ಜನರ ಮುಂದಿದೆ ಎಂದು ಅವರು ಹೇಳಿದರು.
ಪಾಕಿಸ್ತಾನ ಬಿಟ್ಟು 56 ಮುಸ್ಲಿಂ ರಾಷ್ಟ್ರಗಳು ಇಂದು ಭಾರತದ ಬೆಂಬಲಕ್ಕೆ ನಿಂತಿದ್ದರೆ ಅದಕ್ಕೆ ಪ್ರಧಾನಿ ಮೋದಿಯವರ ವಿದೇಶ ಪ್ರವಾಸವೇ ಕಾರಣ. ಮೋದಿಯವರು ತಣ್ಣಗೆ ಇದ್ದು ಏಟು ಹೊಡೆಯುವವರು. ಜಮ್ಮು ಕಾಶ್ಮೀರದಲ್ಲಿನ ಘಟನೆಗೆ ಸೂಕ್ತ ದಿನಗಳಲ್ಲಿ ಉತ್ತರ ನೀಡಲಿದ್ದಾರೆ. ಅದಕ್ಕಾಗಿ ಭಾರತ ಕಾಯುತ್ತಿದೆ ಎಂದರು.
ಪ್ರಧಾನಿಯಾಗುತ್ತಿದ್ದಂತೆ ಮೋದಿಜಿಯವರು ಸೈನಿಕರ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಸೈನಿಕರಿಗೂ ಕೂಡಾ ಇಂಥಹ ಪ್ರಧಾನಿಯೊಬ್ಬರ ಅವಶ್ಯಕತೆ ಇತ್ತು. ಅದನ್ನು ಭಾರತೀಯ ಸೈನಿಕರೇ ಹೇಳಿ ಕೊಂಡಿದ್ದಾರೆ. ಪ್ರತಿಯೊಂದು ದೇಶದಲ್ಲಿಯೂ ಇರುವ ಯುದ್ಧ ಸ್ಮಾರಕಗಳ ಬಗ್ಗೆ ಕನಸು ಕಂಡ ಮೋದಿಯವರು ವಾರ್ ಮೆಮೋರಿಯಲ್ ನಿರ್ಮಾಣ ಮಾಡಿ ಇಂದು ದೇಶಕ್ಕೆ ಸಮರ್ಪಿಸಿದ್ದಾರೆ. ಇಲ್ಲಿ ಹುತಾತ್ಮರಾದ 20 ಸಾವಿರ ಸೈನಿಕರ ಹೆಸರಿನಲ್ಲಿ ಪ್ರತ್ಯೇಕ ಕಲ್ಲುಗಳ ಸ್ಥಾಪನೆ ಮಾಡಲಾಗಿದೆ. ಕಳೆದ 70 ವರ್ಷದಲ್ಲಿ ಆಗಿರುವ ಕಾರ್ಯ ಇವತ್ತು ಮೋದಿಯವರಿಂದ ಆಗಿದೆ ಎನ್ನುವುದು ನಾವು ಸಂತೋಷ ಪಡಬೇಕಾಗಿದೆ.

ನಮ್ಮ ವೈರಿ ರಾಷ್ಟ್ರ ಪಾಕಿಸ್ತಾನ ಬೇಡುವ ಹಂತಕ್ಕೆ ಬಂದು ನಿಂತಿದೆ. ಹೀಗೆ ಆದರೆ ಮುಂದೆ ಭಿಕ್ಷೆ ಪಾತ್ರೆಯನ್ನೂ ಅದು ಕಳೆದುಕೊಳ್ಳಲಿದೆ. ಪಾಕಿಸ್ತಾನದ ಮೇಲೆ ಆಂತರಿಕ ಹೊಡೆತ ನೀಡಲಾಗುತ್ತಿದೆ. ಆಂತರಿಕವಾಗಿ ಪಾಕಿಸ್ತಾನದ ಹಣಕಾಸು ವ್ಯವಸ್ಥೆಯನ್ನು ಹಿಂಡುವ ಕಾರ್ಯ ಆಗುತ್ತಿದೆ. ಪಾಕಿಸ್ತಾನದ ಎಲ್ಲ ಕುಕೃತ್ಯಗಳಿಗೆ ತಕ್ಕ ಉತ್ತರ ನೀಡುವ ಕೆಲಸ ಆಗುತ್ತಿದೆ ಎಂದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

15 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

17 hours ago