Featured

ಪ್ರಧಾನಿ ಮೋದಿಯವರ ಆಡಳಿತದಿಂದ ಭಾರತ ಪ್ರಭಾವಿಶಾಲಿ ಎಂದು ಗುರುತಿಸಿಕೊಂಡಿದೆ : ಚಕ್ರವರ್ತಿ ಸೂಲಿಬೆಲೆ – Vishwanews24

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಭಾರತ ಪ್ರಭಾವಿಶಾಲಿ ಎಂದು ಗುರುತಿಸಿಕೊಂಡಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರದ ಪುಲ್ವಾಮ ಘಟನೆಯ ಬಳಿಕ ವಿಶ್ವಸಂಸ್ಥೆಯ 14 ರಾಷ್ಟ್ರಗಳ ಸೆಕ್ಯುರಿಟಿ ಕೌನ್ಸಿಲ್‌ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡುವ ಮೂಲಕ ಮೋದಿಯ ಪ್ರಭಾವವನ್ನು ಜಗತ್ತು ಒಪ್ಪಿಕೊಂಡಂತಾಗಿದೆ ಎಂದು ಟೀಂ ಮೋದಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಕುಂದಾಪುರದಲ್ಲಿ ಟೀಮ್ ಮೋದಿ ಕುಂದಾಪುರ ಆಯೋಜಿಸಿದ ’ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ದೇಶದ ಸಾರ್ವಭೌಮತೆಯನ್ನು ಉಳಿಸಿಕೊಳ್ಳಲು, ಜಾಗತಿಕ ಮಟ್ಟದಲ್ಲಿ ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ನಿರೂಪಿಸಲು ಮೋದಿಯಂಥಹ ದೇಶ ಭಕ್ತರು ಬೇಕು. ಈ ದೇಶದ ಜನತೆ ಮತ್ತೆ ಮೋದಿಯವರನ್ನು ಬೆಂಬಲಿಸಲಿದ್ದಾರೆ. ಮೋದಿಜಿಯವರ ಆಡಳಿತ ವ್ಯವಸ್ಥೆಯಲ್ಲಿ ಭಾರತ ಸಾಧಿಸಿರುವ ಮಹತ್ವದ ಮೈಲಿಗಲ್ಲು ಜನರ ಮುಂದಿದೆ ಎಂದು ಅವರು ಹೇಳಿದರು.
ಪಾಕಿಸ್ತಾನ ಬಿಟ್ಟು 56 ಮುಸ್ಲಿಂ ರಾಷ್ಟ್ರಗಳು ಇಂದು ಭಾರತದ ಬೆಂಬಲಕ್ಕೆ ನಿಂತಿದ್ದರೆ ಅದಕ್ಕೆ ಪ್ರಧಾನಿ ಮೋದಿಯವರ ವಿದೇಶ ಪ್ರವಾಸವೇ ಕಾರಣ. ಮೋದಿಯವರು ತಣ್ಣಗೆ ಇದ್ದು ಏಟು ಹೊಡೆಯುವವರು. ಜಮ್ಮು ಕಾಶ್ಮೀರದಲ್ಲಿನ ಘಟನೆಗೆ ಸೂಕ್ತ ದಿನಗಳಲ್ಲಿ ಉತ್ತರ ನೀಡಲಿದ್ದಾರೆ. ಅದಕ್ಕಾಗಿ ಭಾರತ ಕಾಯುತ್ತಿದೆ ಎಂದರು.
ಪ್ರಧಾನಿಯಾಗುತ್ತಿದ್ದಂತೆ ಮೋದಿಜಿಯವರು ಸೈನಿಕರ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಸೈನಿಕರಿಗೂ ಕೂಡಾ ಇಂಥಹ ಪ್ರಧಾನಿಯೊಬ್ಬರ ಅವಶ್ಯಕತೆ ಇತ್ತು. ಅದನ್ನು ಭಾರತೀಯ ಸೈನಿಕರೇ ಹೇಳಿ ಕೊಂಡಿದ್ದಾರೆ. ಪ್ರತಿಯೊಂದು ದೇಶದಲ್ಲಿಯೂ ಇರುವ ಯುದ್ಧ ಸ್ಮಾರಕಗಳ ಬಗ್ಗೆ ಕನಸು ಕಂಡ ಮೋದಿಯವರು ವಾರ್ ಮೆಮೋರಿಯಲ್ ನಿರ್ಮಾಣ ಮಾಡಿ ಇಂದು ದೇಶಕ್ಕೆ ಸಮರ್ಪಿಸಿದ್ದಾರೆ. ಇಲ್ಲಿ ಹುತಾತ್ಮರಾದ 20 ಸಾವಿರ ಸೈನಿಕರ ಹೆಸರಿನಲ್ಲಿ ಪ್ರತ್ಯೇಕ ಕಲ್ಲುಗಳ ಸ್ಥಾಪನೆ ಮಾಡಲಾಗಿದೆ. ಕಳೆದ 70 ವರ್ಷದಲ್ಲಿ ಆಗಿರುವ ಕಾರ್ಯ ಇವತ್ತು ಮೋದಿಯವರಿಂದ ಆಗಿದೆ ಎನ್ನುವುದು ನಾವು ಸಂತೋಷ ಪಡಬೇಕಾಗಿದೆ.

ನಮ್ಮ ವೈರಿ ರಾಷ್ಟ್ರ ಪಾಕಿಸ್ತಾನ ಬೇಡುವ ಹಂತಕ್ಕೆ ಬಂದು ನಿಂತಿದೆ. ಹೀಗೆ ಆದರೆ ಮುಂದೆ ಭಿಕ್ಷೆ ಪಾತ್ರೆಯನ್ನೂ ಅದು ಕಳೆದುಕೊಳ್ಳಲಿದೆ. ಪಾಕಿಸ್ತಾನದ ಮೇಲೆ ಆಂತರಿಕ ಹೊಡೆತ ನೀಡಲಾಗುತ್ತಿದೆ. ಆಂತರಿಕವಾಗಿ ಪಾಕಿಸ್ತಾನದ ಹಣಕಾಸು ವ್ಯವಸ್ಥೆಯನ್ನು ಹಿಂಡುವ ಕಾರ್ಯ ಆಗುತ್ತಿದೆ. ಪಾಕಿಸ್ತಾನದ ಎಲ್ಲ ಕುಕೃತ್ಯಗಳಿಗೆ ತಕ್ಕ ಉತ್ತರ ನೀಡುವ ಕೆಲಸ ಆಗುತ್ತಿದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago