Featured

ಪ್ರಧಾನಿ ಮೋದಿಯಿಂದ ದೀಪಾವಳಿಗೆ ಬಂಪರ್‌ ಉಡುಗೊರೆ

ನವದೆಹಲಿಕೃಷಿ ಹೊರತುಪಡಿಸಿದರೆ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎರಡನೇ ಅತಿದೊಡ್ಡ ವಲಯವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವಲಯ (ಎಂಎಸ್‌ಎಂಇ)ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ಹೆಚ್ಚಿನ ಉದ್ಯೋಗ ಸೃಷ್ಟಿಮತ್ತು ಎಂಎಸ್‌ಎಂಇಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇವಲ 59 ನಿಮಿಷಗಳಲ್ಲೇ ಸಾಲ ಒದಗಿಸುವುದೂ ಸೇರಿದಂತೆ 12 ಹೊಸ ಯೋಜನೆಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂಎಸ್‌ಎಂಇ)ಗಳಿಗೆ ಬೆಂಬಲ ಮತ್ತು ನೆರವು ನೀಡುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿ, ಜಿಎಸ್‌ಟಿ ನೊಂದಾಯಿತ ಎಂಎಸ್‌ಎಂಇಗಳಿಗೆ www.psbloanin59min.com ಮೂಲಕ ಕೇವಲ 59 ನಿಮಿಷಗಳಲ್ಲೇ 1 ಕೋಟಿ ರು.ವರೆಗೂ ಸಾಲ ನೀಡಲಾಗುವುದು. ಜೊತೆಗೆ 1 ಕೋಟಿ ರು.ವರೆಗಿನ ಸಾಲಕ್ಕೆ ಶೇ.2ರಷ್ಟುಬಡ್ಡಿ ಸಬ್ಸಿಡಿ ನೀಡಲಾಗುವುದು, ಇದಲ್ಲದೇ ಪ್ರೀ ಶಿಪ್‌ಮೆಂಟ್‌ ಮತ್ತು ಪೋಸ್ಟ್‌ ಶಿಪ್‌ಮೆಂಟ್‌ ಸಾಲಕ್ಕೆ ನೀಡಲಾಗುತ್ತಿದ್ದ ಶೇ.3ರಷ್ಟುಬಡ್ಡಿ ರಿಯಾಯಿತಿಯನ್ನು ಶೇ.5ಕ್ಕೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.

ಇದಲ್ಲದೆ ವಲಯದಲ್ಲಿನ ಇನ್ಸ್‌ಪೆಕ್ಟರ್‌ ರಾಜ್‌ ನೀತಿಗೆ ಬ್ರೇಕ್‌ ಹಾಕಲು ಸರ್ಕಾರ ಮಹತ್ವದ ನಿರ್ಧಾರ, ಕೈಗೊಂಡಿದೆ. ಇನ್ನು ಮುಂದೆ ಯಾವ ಕಾರ್ಖಾನೆಗಳಿಗೆ ಯಾವ ಅಧಿಕಾರಿ ತಪಾಸಣೆಗೆ ಹೋಗಬೇಕು ಎನ್ನುದನ್ನು ಕಂಪ್ಯೂಟರ್‌ ಮೂಲಕವೇ ನಿರ್ಧರಿಸಲಾಗುವುದು. ಹೀಗೆ ತಪಾಸಣೆಗೆ ಹೋದ ಅಧಿಕಾರ ಅಲ್ಲಿಯ ವರದಿಯನ್ನು 48 ಗಂಟೆಗಳ ಒಳಗೆ ಪೋರ್ಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಇದೊಂದು ಅತ್ಯಂತ ಮಹತ್ವದ ನಿರ್ಧಾರ ಎಂದು ಮೋದಿ ಪ್ರಕಟಿಸಿದರು. ಜೊತೆಗೆ ಎಂಎಎಸ್‌ಎಂಇ ವಲಯದ ಅಭಿವೃದ್ಧಿಗೆ ಪೂರಕವಾದ ಇತರೆ ಹಲವು ಕ್ರಮಗಳನ್ನು ಪ್ರಧಾನಿ ಪ್ರಕಟಿಸಿದರು.

59 ನಿಮಿಷದಲ್ಲೇ ಸಾಲ:

ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ನೀಡಲು www.psbloanin59min.com ಎಂಬ ವೆಬ್‌ ಆರಂಭಿಸಲಾಗಿದೆ. ಈ ಮೂಲಕ ಜಿಎಸ್ಟಿನೊಂದಾಯಿತ ಉದ್ದಿಮೆಗಳು ಕೇವಲ 59 ನಿಮಿಷದಲ್ಲೇ 1 ಕೋಟಿ ರು. ವರೆಗೂ ಸಾಲಸೌಲಭ್ಯ ಪಡೆಯಬಹುದಾಗಿದೆ. ಇಷ್ಟುದಿನ ಉದ್ದಿಮೆ ಸಾಲ ಪಡೆಯಲು 20ರಿಂದ 25 ದಿನಗಳು ಬೇಕಾಗುತ್ತಿದ್ದವು. ಜೊತೆಗೆ ಸಾಲದ ಹಣವನ್ನು ವಿತರಿಸಲು 7ರಿಂದ 8 ದಿನಗಳು ಬೇಕಾಗುತ್ತಿದ್ದವು.

ಜಾಹೀರಾತುಗಳು

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago