Featured

ಪ್ರಧಾನಿ ಮೋದಿಯಿಂದ ದೀಪಾವಳಿಗೆ ಬಂಪರ್‌ ಉಡುಗೊರೆ

ನವದೆಹಲಿಕೃಷಿ ಹೊರತುಪಡಿಸಿದರೆ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎರಡನೇ ಅತಿದೊಡ್ಡ ವಲಯವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವಲಯ (ಎಂಎಸ್‌ಎಂಇ)ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ಹೆಚ್ಚಿನ ಉದ್ಯೋಗ ಸೃಷ್ಟಿಮತ್ತು ಎಂಎಸ್‌ಎಂಇಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇವಲ 59 ನಿಮಿಷಗಳಲ್ಲೇ ಸಾಲ ಒದಗಿಸುವುದೂ ಸೇರಿದಂತೆ 12 ಹೊಸ ಯೋಜನೆಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂಎಸ್‌ಎಂಇ)ಗಳಿಗೆ ಬೆಂಬಲ ಮತ್ತು ನೆರವು ನೀಡುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿ, ಜಿಎಸ್‌ಟಿ ನೊಂದಾಯಿತ ಎಂಎಸ್‌ಎಂಇಗಳಿಗೆ www.psbloanin59min.com ಮೂಲಕ ಕೇವಲ 59 ನಿಮಿಷಗಳಲ್ಲೇ 1 ಕೋಟಿ ರು.ವರೆಗೂ ಸಾಲ ನೀಡಲಾಗುವುದು. ಜೊತೆಗೆ 1 ಕೋಟಿ ರು.ವರೆಗಿನ ಸಾಲಕ್ಕೆ ಶೇ.2ರಷ್ಟುಬಡ್ಡಿ ಸಬ್ಸಿಡಿ ನೀಡಲಾಗುವುದು, ಇದಲ್ಲದೇ ಪ್ರೀ ಶಿಪ್‌ಮೆಂಟ್‌ ಮತ್ತು ಪೋಸ್ಟ್‌ ಶಿಪ್‌ಮೆಂಟ್‌ ಸಾಲಕ್ಕೆ ನೀಡಲಾಗುತ್ತಿದ್ದ ಶೇ.3ರಷ್ಟುಬಡ್ಡಿ ರಿಯಾಯಿತಿಯನ್ನು ಶೇ.5ಕ್ಕೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.

ಇದಲ್ಲದೆ ವಲಯದಲ್ಲಿನ ಇನ್ಸ್‌ಪೆಕ್ಟರ್‌ ರಾಜ್‌ ನೀತಿಗೆ ಬ್ರೇಕ್‌ ಹಾಕಲು ಸರ್ಕಾರ ಮಹತ್ವದ ನಿರ್ಧಾರ, ಕೈಗೊಂಡಿದೆ. ಇನ್ನು ಮುಂದೆ ಯಾವ ಕಾರ್ಖಾನೆಗಳಿಗೆ ಯಾವ ಅಧಿಕಾರಿ ತಪಾಸಣೆಗೆ ಹೋಗಬೇಕು ಎನ್ನುದನ್ನು ಕಂಪ್ಯೂಟರ್‌ ಮೂಲಕವೇ ನಿರ್ಧರಿಸಲಾಗುವುದು. ಹೀಗೆ ತಪಾಸಣೆಗೆ ಹೋದ ಅಧಿಕಾರ ಅಲ್ಲಿಯ ವರದಿಯನ್ನು 48 ಗಂಟೆಗಳ ಒಳಗೆ ಪೋರ್ಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಇದೊಂದು ಅತ್ಯಂತ ಮಹತ್ವದ ನಿರ್ಧಾರ ಎಂದು ಮೋದಿ ಪ್ರಕಟಿಸಿದರು. ಜೊತೆಗೆ ಎಂಎಎಸ್‌ಎಂಇ ವಲಯದ ಅಭಿವೃದ್ಧಿಗೆ ಪೂರಕವಾದ ಇತರೆ ಹಲವು ಕ್ರಮಗಳನ್ನು ಪ್ರಧಾನಿ ಪ್ರಕಟಿಸಿದರು.

59 ನಿಮಿಷದಲ್ಲೇ ಸಾಲ:

ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ನೀಡಲು www.psbloanin59min.com ಎಂಬ ವೆಬ್‌ ಆರಂಭಿಸಲಾಗಿದೆ. ಈ ಮೂಲಕ ಜಿಎಸ್ಟಿನೊಂದಾಯಿತ ಉದ್ದಿಮೆಗಳು ಕೇವಲ 59 ನಿಮಿಷದಲ್ಲೇ 1 ಕೋಟಿ ರು. ವರೆಗೂ ಸಾಲಸೌಲಭ್ಯ ಪಡೆಯಬಹುದಾಗಿದೆ. ಇಷ್ಟುದಿನ ಉದ್ದಿಮೆ ಸಾಲ ಪಡೆಯಲು 20ರಿಂದ 25 ದಿನಗಳು ಬೇಕಾಗುತ್ತಿದ್ದವು. ಜೊತೆಗೆ ಸಾಲದ ಹಣವನ್ನು ವಿತರಿಸಲು 7ರಿಂದ 8 ದಿನಗಳು ಬೇಕಾಗುತ್ತಿದ್ದವು.

ಜಾಹೀರಾತುಗಳು

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago