Featured

ಪ್ರಧಾನಿ ಮೋದಿಯಿಂದ ದೀಪಾವಳಿಗೆ ಬಂಪರ್‌ ಉಡುಗೊರೆ

ನವದೆಹಲಿಕೃಷಿ ಹೊರತುಪಡಿಸಿದರೆ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎರಡನೇ ಅತಿದೊಡ್ಡ ವಲಯವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವಲಯ (ಎಂಎಸ್‌ಎಂಇ)ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ಹೆಚ್ಚಿನ ಉದ್ಯೋಗ ಸೃಷ್ಟಿಮತ್ತು ಎಂಎಸ್‌ಎಂಇಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇವಲ 59 ನಿಮಿಷಗಳಲ್ಲೇ ಸಾಲ ಒದಗಿಸುವುದೂ ಸೇರಿದಂತೆ 12 ಹೊಸ ಯೋಜನೆಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂಎಸ್‌ಎಂಇ)ಗಳಿಗೆ ಬೆಂಬಲ ಮತ್ತು ನೆರವು ನೀಡುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿ, ಜಿಎಸ್‌ಟಿ ನೊಂದಾಯಿತ ಎಂಎಸ್‌ಎಂಇಗಳಿಗೆ www.psbloanin59min.com ಮೂಲಕ ಕೇವಲ 59 ನಿಮಿಷಗಳಲ್ಲೇ 1 ಕೋಟಿ ರು.ವರೆಗೂ ಸಾಲ ನೀಡಲಾಗುವುದು. ಜೊತೆಗೆ 1 ಕೋಟಿ ರು.ವರೆಗಿನ ಸಾಲಕ್ಕೆ ಶೇ.2ರಷ್ಟುಬಡ್ಡಿ ಸಬ್ಸಿಡಿ ನೀಡಲಾಗುವುದು, ಇದಲ್ಲದೇ ಪ್ರೀ ಶಿಪ್‌ಮೆಂಟ್‌ ಮತ್ತು ಪೋಸ್ಟ್‌ ಶಿಪ್‌ಮೆಂಟ್‌ ಸಾಲಕ್ಕೆ ನೀಡಲಾಗುತ್ತಿದ್ದ ಶೇ.3ರಷ್ಟುಬಡ್ಡಿ ರಿಯಾಯಿತಿಯನ್ನು ಶೇ.5ಕ್ಕೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.

ಇದಲ್ಲದೆ ವಲಯದಲ್ಲಿನ ಇನ್ಸ್‌ಪೆಕ್ಟರ್‌ ರಾಜ್‌ ನೀತಿಗೆ ಬ್ರೇಕ್‌ ಹಾಕಲು ಸರ್ಕಾರ ಮಹತ್ವದ ನಿರ್ಧಾರ, ಕೈಗೊಂಡಿದೆ. ಇನ್ನು ಮುಂದೆ ಯಾವ ಕಾರ್ಖಾನೆಗಳಿಗೆ ಯಾವ ಅಧಿಕಾರಿ ತಪಾಸಣೆಗೆ ಹೋಗಬೇಕು ಎನ್ನುದನ್ನು ಕಂಪ್ಯೂಟರ್‌ ಮೂಲಕವೇ ನಿರ್ಧರಿಸಲಾಗುವುದು. ಹೀಗೆ ತಪಾಸಣೆಗೆ ಹೋದ ಅಧಿಕಾರ ಅಲ್ಲಿಯ ವರದಿಯನ್ನು 48 ಗಂಟೆಗಳ ಒಳಗೆ ಪೋರ್ಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಇದೊಂದು ಅತ್ಯಂತ ಮಹತ್ವದ ನಿರ್ಧಾರ ಎಂದು ಮೋದಿ ಪ್ರಕಟಿಸಿದರು. ಜೊತೆಗೆ ಎಂಎಎಸ್‌ಎಂಇ ವಲಯದ ಅಭಿವೃದ್ಧಿಗೆ ಪೂರಕವಾದ ಇತರೆ ಹಲವು ಕ್ರಮಗಳನ್ನು ಪ್ರಧಾನಿ ಪ್ರಕಟಿಸಿದರು.

59 ನಿಮಿಷದಲ್ಲೇ ಸಾಲ:

ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ನೀಡಲು www.psbloanin59min.com ಎಂಬ ವೆಬ್‌ ಆರಂಭಿಸಲಾಗಿದೆ. ಈ ಮೂಲಕ ಜಿಎಸ್ಟಿನೊಂದಾಯಿತ ಉದ್ದಿಮೆಗಳು ಕೇವಲ 59 ನಿಮಿಷದಲ್ಲೇ 1 ಕೋಟಿ ರು. ವರೆಗೂ ಸಾಲಸೌಲಭ್ಯ ಪಡೆಯಬಹುದಾಗಿದೆ. ಇಷ್ಟುದಿನ ಉದ್ದಿಮೆ ಸಾಲ ಪಡೆಯಲು 20ರಿಂದ 25 ದಿನಗಳು ಬೇಕಾಗುತ್ತಿದ್ದವು. ಜೊತೆಗೆ ಸಾಲದ ಹಣವನ್ನು ವಿತರಿಸಲು 7ರಿಂದ 8 ದಿನಗಳು ಬೇಕಾಗುತ್ತಿದ್ದವು.

ಜಾಹೀರಾತುಗಳು

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

6 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago