ನವದೆಹಲಿ:ಕೇಂದ್ರದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನ ಹೊಂದಿದ್ದು, ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಪ್ರಧಾನಿ ಭಾವುಕರಾಗಿದ್ದಾರೆ.
ಸುಷ್ಮಾ ಸ್ವರಾಜ್ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಆತ್ಮೀಯ ವ್ಯಕ್ತಿಯನ್ನ ನೆನೆದು ಭಾವುಕರಾದರು. ಆ ಬಳಿಕ ಸುಷ್ಮಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತ್ವಾನ ಹೇಳಿದರು.
ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ತುತ್ತಾದ ಅವರನ್ನು ಏಮ್ಸ್ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸುಷ್ಮಾ ಸ್ವರಾಜ್ ಸಾವನ್ನಪ್ಪಿದ್ದಾರೆ.
ಸುಷ್ಮಾ ಸ್ವರಾಜ್ ಅಂತಿಮ ದರ್ಶನ ಪಡೆಯಲು ಅನೇಕ ರಾಜಕೀಯ ನಾಯಕರು ನಿವಾಸಕ್ಕೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಬಹುಜನ ಪಕ್ಷದ ಮುಖ್ಯಸ್ಥೆ ಮಾಯಾವತಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ಭಾರತದಲ್ಲಿರುವ ಇಸ್ರೇಲಿ ರಾಯಭಾರಿ ರಾನ್ ಮಲ್ಕಾ ಕೂಡ ಸುಷ್ಮಾ ಸ್ವರಾಜ್ ನಿವಾಸಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…