ನವದೆಹಲಿ: 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರದರ್ಶಿಸುವುದನ್ನು ವಿರೋಧಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿ ಕಾಮೆಂಟ್ ಮಾಡಿದ ಒಂದು ದಿನದ ನಂತರ ಅನಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅನಿಲ್ ಆಂಟೋನಿ ಇಂದು ಟ್ವಿಟರ್ನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.
2002 ರ ಗುಜರಾತ್ ಗಲಭೆಗಳ ಸಾಕ್ಷ್ಯಚಿತ್ರದ ವಿವಾದದ ನಡುವೆ, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಅನಿಲ್ ಆಂಟೋನಿ ಅವರು ಬಿಬಿಸಿಯನ್ನು ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ರಾಜ್ಯ ಪ್ರಾಯೋಜಿತ ಚಾನೆಲ್ ಎಂದು ಪರಿಗಣಿಸುವುದಾಗಿ ಮಂಗಳವಾರ ಹೇಳಿದ್ದರು.
ಇದರ ಬೆನ್ನಲ್ಲೇ, ಪಕ್ಷದಿಂದಲೇ ಟೀಕೆಗೆ ಗುರಿಯಾಗಿರುವುದಾಗಿ ಹೇಳಿಕೊಂಡಿದ್ದು, ಅನೇಕ ನಿಂದನೆ ಕರೆಗಳೂ ಬಂದಿವೆ. ನಾನು ಎಲ್ಲೇ ಇದ್ರೂ ನನ್ನ ಜೀವನ ಮುಂದೆ ಸಾಗುತ್ತದೆ. ಹೀಗಾಗಿ ನಾನು ಕಾಂಗ್ರೆಸ್ನ ಎಲ್ಲಾ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…