ಉದಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗ್ಯಾಂಗ್ ಸ್ಟರ್ ಗಳು ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿರುವುದು ವಿವಾದವನ್ನುಂಟು ಮಾಡಿದೆ.
ರಾಜಸ್ತಾನದ ಉದಯಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುಜರಾತಿನಿಂದ ಬಂದಿರುವ ಈ ಇಬ್ಬರು ನಾಯಕರು, ಬಡ ಜನರನ್ನು ಕೊಲ್ಲುವ ಉದ್ದೇಶದಿಂದ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಗುಜರಾತ್ ನ ಇಬ್ಬರು ಗ್ಯಾಂಗ್ ನಡೆಸುತ್ತಿದ್ದಾರೆ. ಇವರ ಗುರಿ ಬಡವರನ್ನು ಕೊಲ್ಲುವುದು. ಒಬ್ಬ ಗ್ಯಾಂಗ್ ಸ್ಟರ್ ಪಕ್ಷದ ಮುಖಂಡ ಎಂದು ಪರೋಕ್ಷವಾಗಿ ಶಾ ಅವರನ್ನು ಗ್ಯಾಂಗ್ ಸ್ಟರ್ ಎಂದು ಹೇಳಿದ್ದಾರೆ.
ಇನ್ನೊಬ್ಬ ಗ್ಯಾಂಗ್ ಸ್ಟರ್ ಜನರನ್ನು ವಂಚಿಸಿದ್ದಾನೆ ಮತ್ತು ಈಗ ದೇಶದ ಪ್ರಮುಖ ಹುದ್ದೆಯೊಂದರಲ್ಲಿ ಕುಳಿತುಕೊಂಡಿದ್ದಾನೆ ಎಂದು ರಾಜ್ ಬಬ್ಬರ್, ಪ್ರಧಾನಿ ಮೋದಿಗೆ ಪರೋಕ್ಷವಾಗಿ ಗ್ಯಾಂಗ್ ಸ್ಟರ್ ಪಟ್ಟ ಕಟ್ಟಿದ್ದಾರೆ.
ಕಳೆದ 23ರಂದು ರಾಜ್ ಬಬ್ಬರ್ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ರೂಪಾಯಿ ದರ ಎಷ್ಟು ಕುಸಿಯತ್ತಿದೆ ಎಂದರೆ ಅದರ ಮೌಲ್ಯವು ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಅವರ ವಯಸ್ಸಿನ ಸಂಖ್ಯೆಯತ್ತ ಹೋಗುತ್ತಿದೆ’ ಎಂದು ಟೀಕಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…