ಉದಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗ್ಯಾಂಗ್ ಸ್ಟರ್ ಗಳು ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿರುವುದು ವಿವಾದವನ್ನುಂಟು ಮಾಡಿದೆ.
ರಾಜಸ್ತಾನದ ಉದಯಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುಜರಾತಿನಿಂದ ಬಂದಿರುವ ಈ ಇಬ್ಬರು ನಾಯಕರು, ಬಡ ಜನರನ್ನು ಕೊಲ್ಲುವ ಉದ್ದೇಶದಿಂದ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಗುಜರಾತ್ ನ ಇಬ್ಬರು ಗ್ಯಾಂಗ್ ನಡೆಸುತ್ತಿದ್ದಾರೆ. ಇವರ ಗುರಿ ಬಡವರನ್ನು ಕೊಲ್ಲುವುದು. ಒಬ್ಬ ಗ್ಯಾಂಗ್ ಸ್ಟರ್ ಪಕ್ಷದ ಮುಖಂಡ ಎಂದು ಪರೋಕ್ಷವಾಗಿ ಶಾ ಅವರನ್ನು ಗ್ಯಾಂಗ್ ಸ್ಟರ್ ಎಂದು ಹೇಳಿದ್ದಾರೆ.
ಇನ್ನೊಬ್ಬ ಗ್ಯಾಂಗ್ ಸ್ಟರ್ ಜನರನ್ನು ವಂಚಿಸಿದ್ದಾನೆ ಮತ್ತು ಈಗ ದೇಶದ ಪ್ರಮುಖ ಹುದ್ದೆಯೊಂದರಲ್ಲಿ ಕುಳಿತುಕೊಂಡಿದ್ದಾನೆ ಎಂದು ರಾಜ್ ಬಬ್ಬರ್, ಪ್ರಧಾನಿ ಮೋದಿಗೆ ಪರೋಕ್ಷವಾಗಿ ಗ್ಯಾಂಗ್ ಸ್ಟರ್ ಪಟ್ಟ ಕಟ್ಟಿದ್ದಾರೆ.
ಕಳೆದ 23ರಂದು ರಾಜ್ ಬಬ್ಬರ್ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ರೂಪಾಯಿ ದರ ಎಷ್ಟು ಕುಸಿಯತ್ತಿದೆ ಎಂದರೆ ಅದರ ಮೌಲ್ಯವು ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಅವರ ವಯಸ್ಸಿನ ಸಂಖ್ಯೆಯತ್ತ ಹೋಗುತ್ತಿದೆ’ ಎಂದು ಟೀಕಿಸಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…