ಉದಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗ್ಯಾಂಗ್ ಸ್ಟರ್ ಗಳು ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿರುವುದು ವಿವಾದವನ್ನುಂಟು ಮಾಡಿದೆ.
ರಾಜಸ್ತಾನದ ಉದಯಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುಜರಾತಿನಿಂದ ಬಂದಿರುವ ಈ ಇಬ್ಬರು ನಾಯಕರು, ಬಡ ಜನರನ್ನು ಕೊಲ್ಲುವ ಉದ್ದೇಶದಿಂದ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಗುಜರಾತ್ ನ ಇಬ್ಬರು ಗ್ಯಾಂಗ್ ನಡೆಸುತ್ತಿದ್ದಾರೆ. ಇವರ ಗುರಿ ಬಡವರನ್ನು ಕೊಲ್ಲುವುದು. ಒಬ್ಬ ಗ್ಯಾಂಗ್ ಸ್ಟರ್ ಪಕ್ಷದ ಮುಖಂಡ ಎಂದು ಪರೋಕ್ಷವಾಗಿ ಶಾ ಅವರನ್ನು ಗ್ಯಾಂಗ್ ಸ್ಟರ್ ಎಂದು ಹೇಳಿದ್ದಾರೆ.
ಇನ್ನೊಬ್ಬ ಗ್ಯಾಂಗ್ ಸ್ಟರ್ ಜನರನ್ನು ವಂಚಿಸಿದ್ದಾನೆ ಮತ್ತು ಈಗ ದೇಶದ ಪ್ರಮುಖ ಹುದ್ದೆಯೊಂದರಲ್ಲಿ ಕುಳಿತುಕೊಂಡಿದ್ದಾನೆ ಎಂದು ರಾಜ್ ಬಬ್ಬರ್, ಪ್ರಧಾನಿ ಮೋದಿಗೆ ಪರೋಕ್ಷವಾಗಿ ಗ್ಯಾಂಗ್ ಸ್ಟರ್ ಪಟ್ಟ ಕಟ್ಟಿದ್ದಾರೆ.
ಕಳೆದ 23ರಂದು ರಾಜ್ ಬಬ್ಬರ್ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ರೂಪಾಯಿ ದರ ಎಷ್ಟು ಕುಸಿಯತ್ತಿದೆ ಎಂದರೆ ಅದರ ಮೌಲ್ಯವು ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಅವರ ವಯಸ್ಸಿನ ಸಂಖ್ಯೆಯತ್ತ ಹೋಗುತ್ತಿದೆ’ ಎಂದು ಟೀಕಿಸಿದ್ದರು.
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…