ಉದಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗ್ಯಾಂಗ್ ಸ್ಟರ್ ಗಳು ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿರುವುದು ವಿವಾದವನ್ನುಂಟು ಮಾಡಿದೆ.
ರಾಜಸ್ತಾನದ ಉದಯಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುಜರಾತಿನಿಂದ ಬಂದಿರುವ ಈ ಇಬ್ಬರು ನಾಯಕರು, ಬಡ ಜನರನ್ನು ಕೊಲ್ಲುವ ಉದ್ದೇಶದಿಂದ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಗುಜರಾತ್ ನ ಇಬ್ಬರು ಗ್ಯಾಂಗ್ ನಡೆಸುತ್ತಿದ್ದಾರೆ. ಇವರ ಗುರಿ ಬಡವರನ್ನು ಕೊಲ್ಲುವುದು. ಒಬ್ಬ ಗ್ಯಾಂಗ್ ಸ್ಟರ್ ಪಕ್ಷದ ಮುಖಂಡ ಎಂದು ಪರೋಕ್ಷವಾಗಿ ಶಾ ಅವರನ್ನು ಗ್ಯಾಂಗ್ ಸ್ಟರ್ ಎಂದು ಹೇಳಿದ್ದಾರೆ.
ಇನ್ನೊಬ್ಬ ಗ್ಯಾಂಗ್ ಸ್ಟರ್ ಜನರನ್ನು ವಂಚಿಸಿದ್ದಾನೆ ಮತ್ತು ಈಗ ದೇಶದ ಪ್ರಮುಖ ಹುದ್ದೆಯೊಂದರಲ್ಲಿ ಕುಳಿತುಕೊಂಡಿದ್ದಾನೆ ಎಂದು ರಾಜ್ ಬಬ್ಬರ್, ಪ್ರಧಾನಿ ಮೋದಿಗೆ ಪರೋಕ್ಷವಾಗಿ ಗ್ಯಾಂಗ್ ಸ್ಟರ್ ಪಟ್ಟ ಕಟ್ಟಿದ್ದಾರೆ.
ಕಳೆದ 23ರಂದು ರಾಜ್ ಬಬ್ಬರ್ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ರೂಪಾಯಿ ದರ ಎಷ್ಟು ಕುಸಿಯತ್ತಿದೆ ಎಂದರೆ ಅದರ ಮೌಲ್ಯವು ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಅವರ ವಯಸ್ಸಿನ ಸಂಖ್ಯೆಯತ್ತ ಹೋಗುತ್ತಿದೆ’ ಎಂದು ಟೀಕಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…